ADVERTISEMENT

4ನೇ ದಿನಕ್ಕೆ ಕಾಲಿಟ್ಟ ಅಣ್ಣಾ ಸತ್ಯಾಗ್ರಹ

ಪಿಟಿಐ
Published 26 ಮಾರ್ಚ್ 2018, 19:30 IST
Last Updated 26 ಮಾರ್ಚ್ 2018, 19:30 IST
ಅಣ್ಣಾ ಹಜಾರೆ
ಅಣ್ಣಾ ಹಜಾರೆ   

ನವದೆಹಲಿ/ಮುಂಬೈ: ಕೇಂದ್ರದಲ್ಲಿ ಲೋಕಪಾಲರು ಹಾಗೂ ರಾಜ್ಯಗಳಲ್ಲಿ ಲೋಕಾಯುಕ್ತರನ್ನು ನೇಮಿಸುವಂತೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಸೋಮವಾರ 4ನೇ ದಿನಕ್ಕೆ ಕಾಲಿಟ್ಟಿದೆ.

ಇಲ್ಲಿನ ರಾಮಲೀಲಾ ಮೈದಾನದಲ್ಲಿ ಮಾರ್ಚ್‌ 23ರಿಂದ ಸತ್ಯಾಗ್ರಹ ಕೈಗೊಂಡಿದ್ದು, ಅವರ ತೂಕ 4 ಕೆ.ಜಿ. ಕಡಿಮೆಯಾಗಿದೆ ಎಂದು ಹಜಾರೆ ನಿಕಟವರ್ತಿ ದತ್ತ ಅವಾರಿ ಮಾಹಿತಿ ನೀಡಿದ್ದಾರೆ.

ಅಣ್ಣಾ ಹಜಾರೆ ಅವರ ಹೋರಾಟಕ್ಕೆ ಅವರ ತವರು ಗ್ರಾಮ ರಾಳೇಗಣ ಸಿದ್ಧಿಯಲ್ಲಿ ಬೆಂಬಲ ವ್ಯಕ್ತವಾಗಿದ್ದು, ಸ್ಥಳೀಯ ಹೋರಾಟಗಾರರು ನೀರಿನ ಟ್ಯಾಂಕ್‌ ಮೇಲೆ ಕುಳಿತು ಹಜಾರೆ ಪರ ಘೋಷಣೆ ಕೂಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.