ADVERTISEMENT

ನಾಲ್ವರು ಅಲ್‌–ಬದರ್‌ ಉಗ್ರರ ಸೆರೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2022, 11:57 IST
Last Updated 12 ಫೆಬ್ರುವರಿ 2022, 11:57 IST

ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶನಿವಾರ ಉಗ್ರರ ದಾಳಿಯನ್ನು ವಿಫಲಗೊಳಿಸಿರುವ ಭದ್ರತಾಪಡೆಗಳು, ಅಲ್‌–ಬದರ್‌ ಸಂಘಟನೆಯ ನಾಲ್ವರು ಉಗ್ರರು ಹಾಗೂ ಮೂವರು ತಳಮಟ್ಟದ ಕಾರ್ಯಕರ್ತರನ್ನು ಬಂಧಿಸಿವೆ.

ಸೇನೆ, ಸಿಆರ್‌ಪಿಎಫ್‌, ಸ್ಥಳೀಯ ಪೊಲೀಸರು ನಡೆಸಿದ ಎರಡು ಪ್ರತ್ಯೇಕ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ಅಲ್‌–ಬದರ್‌ ಸಂಘಟನೆಯ ನಾಲ್ವರು ಉಗ್ರರು ಹಾಗೂ ಮೂರು ತಳಮಟ್ಟದ ಕಾರ್ಯಕರ್ತರನ್ನು ಬಂಧಿಸಲಾಗಿದೆ

‘ಬಂಧಿತ ಉಗ್ರರೆಲ್ಲರೂ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದರು. ಬಂಧಿತರಿಂದ ಭಾರಿ ಪ್ರಮಾಣದ ಮದ್ದುಗುಂಡು ಶಸ್ತ್ರಾಸ್ತ್ರಗಳು ಹಾಗೂ ₹ 3.80 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ’ ಎಂದು ಉತ್ತರ ಕಾಶ್ಮೀರದ ಡಿಐಜಿ ಉದಯಭಾಸ್ಕರ ರಫಿಯಬಾದ್‌ನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.