ADVERTISEMENT

ಆಂಧ್ರದಲ್ಲಿ ಅಪಘಾತ: 4 ಸಾವು

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2022, 6:55 IST
Last Updated 5 ಡಿಸೆಂಬರ್ 2022, 6:55 IST

ಗುಂಟೂರು(ಆಂಧ್ರಪ್ರದೇಶ): ಪಿಕಪ್ ವಾಹನ ಪಲ್ಟಿಯಾಗಿ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟು, 15 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ವೇಮೂರು ತಾಲೂಕಿನ ಜಂಪಣಿಯಲ್ಲಿ ವೇಗವಾಗಿ ಬಂದ ಪಿಕಪ್ ವಾಹನ ಪಲ್ಟಿಯಾದ ಪರಿಣಾಮ ಅಪಘಾತ ಸಂಭವಿಸಿದೆ. ವಾಹನದಲ್ಲಿ 20ಕ್ಕೂ ಹೆಚ್ಚು ಜನರಿದ್ದರು. ಇವರಲ್ಲಿ 15 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದುಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ADVERTISEMENT

ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.