ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ಕರ್ನಾಟಕದವರಾದ ಗುಹಾವಟಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಸೇರಿ ನಾಲ್ವರು ನ್ಯಾಯಮೂರ್ತಿಗಳು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬೋಪಣ್ಣ ಸೇರಿದಂತೆ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯ್, ಅನಿರುದ್ಧ್ ಬೋಸ್ ಹಾಗೂ ಸೂರ್ಯಕಾಂತ್ ಅವರಿಗೆಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಪ್ರಮಾಣ ವಚನ ಬೋಧಿಸಲಿದ್ದಾರೆ. ನೂತನ ನ್ಯಾಯಮೂರ್ತಿಗಳ ನೇಮಕಾತಿಯಿಂದಾಗಿ ದಶಕಗಳ ನಂತರ ಸುಪ್ರೀಂ ಕೋರ್ಟ್ 31 ನ್ಯಾಯಮೂರ್ತಿಗಳ ಪೂರ್ಣ ಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.