ಇಟಾವಾ :ಉತ್ತರ ಪ್ರದೇಶದ ಬಲರಾಯಿ ರೈಲ್ವೆ ನಿಲ್ದಾಣದಲ್ಲಿರಾಜಧಾನಿ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ ನಾಲ್ವರು ಸೋಮವಾರ ಮೃತಪಟ್ಟಿದ್ದಾರೆ.
ಜೀತು(20), ಲಾಲ್ ಚಂದ್ರ(21), ಸುರೇಂದ್ರ (20), ಪಿಂಟು(18) ಮೃತಪಟ್ಟವರು.
ಇನ್ನೊಂದು ಪ್ಲ್ಯಾಟ್ಫಾರಂಗೆ ತೆರಳಲು ಹಳಿ ದಾಟುತ್ತಿದ್ದ ವೇಳೆ ರೈಲು ಇವರ ಮೇಲೆ ಹರಿದು ಈ ಅವಘಡ ಸಂಭವಿಸಿದೆ.
ಘಟನೆಗೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮೃತರ ಕುಟುಂಬದವರಿಗೆ ನೆರವು ನೀಡುವಂತೆ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.