ADVERTISEMENT

ಶಬರಿಮಲೆ ದೇಗುಲ ಪ್ರವೇಶಿಸಿದ ನಾಲ್ವರು ತೃತೀಯಲಿಂಗಿಗಳು

ಪಿಟಿಐ
Published 18 ಡಿಸೆಂಬರ್ 2018, 12:42 IST
Last Updated 18 ಡಿಸೆಂಬರ್ 2018, 12:42 IST
ಅಯ್ಯಪ್ಪ ಸ್ವಾಮಿ ದೇವಾಲಯ ಪ್ರವೇಶಿಸಿ, ಪೂಜೆ ಸಲ್ಲಿಸಿದ ನಾಲ್ವರು ತೃತೀಯ ಲಿಂಗಿಗಳು
ಅಯ್ಯಪ್ಪ ಸ್ವಾಮಿ ದೇವಾಲಯ ಪ್ರವೇಶಿಸಿ, ಪೂಜೆ ಸಲ್ಲಿಸಿದ ನಾಲ್ವರು ತೃತೀಯ ಲಿಂಗಿಗಳು   

ಶಬರಿಮಲೆ: ನಾಲ್ವರು ತೃತೀಯ ಲಿಂಗಿಗಳು ಬಿಗಿ ಪೊಲೀಸ್‌ ಭದ್ರತೆಯಲ್ಲಿ ಮಂಗಳವಾರ ಅಯ್ಯಪ್ಪ ಸ್ವಾಮಿ ದೇವಾಲಯ ಪ್ರವೇಶಿಸಿ, ಪೂಜೆ ಸಲ್ಲಿಸಿದರು.

ಸಂಪ್ರದಾಯದಂತೆ ಕಪ್ಪು ಸೀರೆ ಧರಿಸಿ, ಇರುಮುಡಿ ಹೊತ್ತಿದ್ದತೃತೀಯ ಲಿಂಗಿಗಳಾದಅನನ್ಯ, ತೃಪ್ತಿ, ರೆಂಜುಮೊಲ್ ಹಾಗೂ ಅವಂತಿಕ ಅವರಿಗೆ ನಿಲಾಕ್ಕಲ್‌ನಿಂದ ಪಂಪಾನದಿಯವರೆಗೂ ಪೊಲೀಸರು ಭದ್ರತೆ ಒದಗಿಸಿದರು.

‘ದೇವರ ದರ್ಶನದಿಂದ ಅತೀವ ಸಂತೋಷವಾಗಿದೆ. ಶಬರಿಮಲೆಗೆ ಬರುವುದು ಜೀವನದ ಗುರಿಯಾಗಿತ್ತು’ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಕೇರಳ ಹೈಕೋರ್ಟ್ ನಿಯೋಜಿತ ಮೇಲುಸ್ತುವಾರಿ ಸಮಿತಿ ಸದಸ್ಯ, ಡಿಜಿಪಿ ಎ. ಹೇಮಚಂದ್ರನ್ ಹಾಗೂ ಐಜಿಪಿ ಮನೋಜ್ ಅಬ್ರಾಹಂ ಅವರನ್ನು ಸೋಮವಾರ ಈ ತೃತೀಯ ಲಿಂಗಿಗಳು ಭೇಟಿ ಮಾಡಿದ ನಂತರ ದೇವಾಲಯಕ್ಕೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.