ತಿರುವನಂತಪುರಂ: ವಿಥುರಾದ ಕಲ್ಲಾರ್ ಬಳಿ 40 ವರ್ಷದ ಆನೆಯ ಶವ ಶನಿವಾರ ಪತ್ತೆಯಾಗಿದೆ. ಈ ವೇಳೆ 9 ತಿಂಗಳ ಆನೆ ಮರಿ, ತನ್ನ ತಾಯಿಯನ್ನು ಎಚ್ಚರಿಸಲು ಪ್ರಯತ್ನಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು ಎಂದು ಅಧಿಕಾರಿಗಳು ತಿಳಿಸಿದರು.
ಖಾಸಗಿ ತೋಟವೊಂದರಲ್ಲಿ ಆನೆಯ ಶವ ಪತ್ತೆಯಾಗಿತ್ತು. ಈ ಬಗ್ಗೆ ರಬ್ಬರ್ ಟ್ಯಾಪರ್ಗಳು ಪೊಲೀಸರಿಗೆ ತಿಳಿಸಿದರು. ಪೊಲೀಸರು ಈ ಮಾಹಿತಿಯನ್ನು ಅರಣ್ಯ ಅಧಿಕಾರಿಗಳಿಗೆ ರವಾನಿಸಿದರು.
‘ತಾಯಿ ಆನೆಯ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ. ಆನೆ, ಶ್ವಾಸಕೋಶ ಸಂಬಂಧಿತ ಕಾಯಿಲೆಯಿಂದಾಗಿ ಮೃತಪಟ್ಟಿರುವುದು ಪರೀಕ್ಷೆಯಲ್ಲಿ ತಿಳಿದುಬಂದಿದೆ’ ಎಂದು ಅವರು ಮಾಹಿತಿ ನೀಡಿದರು.
‘ಆನೆ ಮರಿ ತನ್ನ ತಾಯಿಯ ಬಳಿ ಯಾರನ್ನು ಬರಲು ಬಿಡುತ್ತಿರಲಿಲ್ಲ. ಮಧ್ಯಾಹ್ನ 12 ಗಂಟೆಯ ಬಳಿಕ ಮರಿಯನ್ನು ಕುತ್ತೂರ್ನಲ್ಲಿರುವ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು’ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.