ADVERTISEMENT

ಜನಪ್ರತಿನಿಧಿಗಳಿಗೆ ಅಪರಾಧ ಹಿನ್ನೆಲೆ: ಕಾನೂನು ತಿದ್ದುಪಡಿ ಅಗತ್ಯ-ವಿಕಾಸ್ ಸಿಂಗ್

ಸುಪ್ರೀಂಕೋರ್ಟ್ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರ ಅಭಿಪ್ರಾಯ

ಪಿಟಿಐ
Published 15 ಆಗಸ್ಟ್ 2022, 13:57 IST
Last Updated 15 ಆಗಸ್ಟ್ 2022, 13:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದ ಶೇಕಡಾ 43ರಷ್ಟು ಜನಪ್ರತಿನಿಧಿಗಳು ಅಪರಾಧ ಹಿನ್ನೆಲೆಯನ್ನು ಹೊಂದಿದ್ದಾರೆ. ಇಂಥವರು ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯುವ ಕಾನೂನಿನ ಅಗತ್ಯ ಇದೆ ಎಂದು ಸುಪ್ರೀಂಕೋರ್ಟ್ ಬಾರ್‌ ಅಸೋಸಿಯೇಷನ್‌ (ಎಸ್‌ಸಿಬಿಎ) ಅಧ್ಯಕ್ಷ ವಿಕಾಸ್ ಸಿಂಗ್‌ ಅಭಿಪ್ರಾಯ ಪಟ್ಟಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿದ ಅವರು, ‘ಸ್ವಾತಂತ್ರ್ಯದ 75 ವರ್ಷಗಳ ನಂತರವೂಅಪರಾಧ ಹಿನ್ನೆಲೆ ಹೊಂದಿದ ಶೇಕಡ 43ರಷ್ಟು ಜನಪ್ರತಿನಿಧಿಗಳು ಚುನಾಯಿತರಾಗುತ್ತಿದ್ದಾರೆ. ಇದನ್ನು ಸರಿಪಡಿಸಬೇಕಾದ ಅಗತ್ಯವಿದೆ ಎಂದು ಭಾವಿಸುತ್ತೇನೆ. ಆದರೆ ಯಾವ ರಾಜಕೀಯ ಪಕ್ಷಗಳ ನೇತಾರರೂ ಈ ಕೆಲಸಕ್ಕೆಮುಂದಾಗುವುದಿಲ್ಲ. ನಾವೇ ಕಾನೂನಿಗೆ ತಿದ್ದುಪಡಿ ತರಬೇಕು’ ಎಂದು ಹೇಳಿದರು.

ಈ ಬಗ್ಗೆ ಗಂಭೀರವಾಗಿ ಯೋಚಿಸುವಂತೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರಿಗೆ ಮನವಿ ಮಾಡಿದರು.

ADVERTISEMENT

ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಸುಪ್ರೀಂಕೋರ್ಟ್‌ ಅಂಗಳದಲ್ಲಿ ದ್ವಜಾರೋಹಣ ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.