ನವದೆಹಲಿ: ಉತ್ತರ ದೆಹಲಿಯಲ್ಲಿ ಆರು ಮಂದಿಯನ್ನು ಬಂಧಿಸಿರುವ ಪೊಲೀಸರು ಅವರ ಬಳಿಯಿದ್ದ 4,500 ಜೀವಂತ ಕಾಟ್ರೇಜ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ರಮೇಶ್ ಕುಮಾರ್, ದಿಪಾಂಶು, ಇಕ್ರಂ, ಅಕ್ರಂ, ಮನೋಜ್ ಕುಮಾರ್ ಮತ್ತು ಅಮಿತ್ ರಾವ್ ಎಂದು ಗುರುತಿಸಲಾಗಿದೆ ಎಂದು ಡಿಸಿಪಿ (ವಿಶೇಷ ಘಟಕ) ಸಂಜೀವ್ ಕುಮಾರ್ ಯಾದವ್ ಗುರುವಾರ ತಿಳಿಸಿದ್ದಾರೆ.
ಆರೋಪಿಗಳಲ್ಲಿ ಮೊದಲ ವ್ಯಕ್ತಿಯ ಬಂಧನ ನಗರದ ಬುರಾರಿ ಪ್ರದೇಶದಲ್ಲಿ ಇದೇ 14ರಂದು ನಡೆದಿತ್ತು. ಈ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.