ADVERTISEMENT

ಲಖಿಂಪುರಕ್ಕೆ ನಾಳೆ ಭೇಟಿ ನೀಡಲಿದೆ ರಾಹುಲ್‌ ನೇತೃತ್ವದ ಕಾಂಗ್ರೆಸ್‌ ನಿಯೋಗ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಅಕ್ಟೋಬರ್ 2021, 16:11 IST
Last Updated 5 ಅಕ್ಟೋಬರ್ 2021, 16:11 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ    

ನವದೆಹಲಿ:ರಾಹುಲ್ ಗಾಂಧಿ ನೇತೃತ್ವದ ಐವರು ಸದಸ್ಯರ ಕಾಂಗ್ರೆಸ್ ನಿಯೋಗ ನಾಳೆ ಉತ್ತರ ಪ್ರದೇಶದ ಲಖಿಂಪುರ್ ಖೇರಿಗೆ ಭೇಟಿ ನೀಡಲಿದೆ

ಲಖಿಂಪುರ–ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ 8 ಜನರು ಸಾವನ್ನಪ್ಪಿದ್ದರು.

ದುರ್ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಲು ತೆರಳುತ್ತಿದ್ದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದರು. ಇಂದು ಅವರ ಮೇಲೆ ಹಲವು ಕೇಸುಗಳನ್ನು ಹಾಕಲಾಗಿದ್ದು, ಬಂಧಿಸಲಾಗಿದೆ.

ADVERTISEMENT

ಪ್ರಿಯಾಂಕಾ ಬಂಧನವನ್ನು ವಿರೋಧಿಸಿ ಕಾಂಗ್ರೆಸ್‌ ದೇಶದಾದ್ಯಂತ ಪ್ರತಿಭಟನೆ ನಡೆಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.