ADVERTISEMENT

ಹಿಮಾಚಲ ಪ್ರದೇಶದ ದಿಢೀರ್‌ ಪ್ರವಾಹದಲ್ಲಿ ನಾಪತ್ತೆಯಾದವರು ಇನ್ನೂ ಸಿಕ್ಕಿಲ್ಲ

ಪಿಟಿಐ
Published 21 ಆಗಸ್ಟ್ 2022, 13:50 IST
Last Updated 21 ಆಗಸ್ಟ್ 2022, 13:50 IST
ಧರ್ಮಶಾಲಾದಲ್ಲಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗೆ ಬಿದ್ದಿದ್ದ ದೊಡ್ಡ ಕಲ್ಲು ಬಂಡೆಯನ್ನು ತೆರವುಗೊಳಿಸುವ ಕಾರ್ಯ ಭಾನುವಾರ ನಡೆಯಿತು – ಎಪಿ ಚಿತ್ರ
ಧರ್ಮಶಾಲಾದಲ್ಲಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗೆ ಬಿದ್ದಿದ್ದ ದೊಡ್ಡ ಕಲ್ಲು ಬಂಡೆಯನ್ನು ತೆರವುಗೊಳಿಸುವ ಕಾರ್ಯ ಭಾನುವಾರ ನಡೆಯಿತು – ಎಪಿ ಚಿತ್ರ   

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಉಂಟಾದ ದಿಢೀರ್‌ ಪ್ರವಾಹ ಮತ್ತು ಭೂಕುಸಿತದಿಂದಾಗಿ ಶನಿವಾರ ಕಾಣೆಯಾಗಿದ್ದ ಐದು ಮಂದಿ ಇನ್ನೂ ಪತ್ತೆಯಾಗಿಲ್ಲ ಎಂದು ಹಿರಿಯ ಅಧಿಕಾರಿಗಳು ಭಾನುವಾರ ತಿಳಿಸಿದರು.

‘ಮಂಡಿ–ಕಟೊಲಾ–ಪರಾಶರ ರಸ್ತೆಯಲ್ಲಿ ಭೂಕುಸಿತ ಉಂಟಾಗಿ ಈ ಐವರು ಕಾಣೆಯಾಗಿದ್ದರು’ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ನಿರ್ದೇಶಕ ಸುದೇಶ್‌ ಕುಮಾರ್‌ ಮೊಕ್ತಾ ಮಾಹಿತಿ ನೀಡಿದರು.

ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳಿಗೆ ರಾಜ್ಯ ವಿಪತ್ತು ಸ್ಪಂದನಾ ನಿಧಿಯಿಂದ ₹232 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ (ಕಂದಾಯ) ಓಂಕಾರ್‌ ಶರ್ಮಾ ತಿಳಿಸಿದರು.

ADVERTISEMENT

ಮಂಡಿ, ಕಾಂಗ್ರಾ ಮತ್ತು ಚಾಂಬಾ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗಿತ್ತು. ಮಳೆಯಿಂದಾಗಿ 22 ಮಂದಿ ಮೃತಪಟ್ಟು, 12 ಮಂದಿ ಗಾಯಗೊಂಡಿದ್ದರು.

ಮ್ಯಾಜಿಸ್ಟೀರಿಯಲ್‌ ತನಿಖೆಗೆ ಆದೇಶ: ಶನಿವಾರ ಸುರಿದ ಭಾರಿ ಮಳೆಯಿಂದಾಗಿ ನೂರ್‌ಪುರ ತಾಲ್ಲೂಕಿನ ಚಕ್ಕಿ ನದಿಗೆ ಕಟ್ಟಲಾಗಿರುವ ರೈಲು ಸೇತುವೆಯ ಎರಡು ಪಿಲ್ಲರ್‌ಗಳು ಕುಸಿದಿತ್ತು. ಈ ಬಗ್ಗೆ ಮ್ಯಾಜಿಸ್ಟೀರಿಯಲ್‌ ತನಿಖೆ ನಡೆಸುವಂತೆ ಕಂಗ್ರಾ ಜಿಲ್ಲಾ ಮ್ಯಾಜಿಸ್ಟ್ರೇಟರ್‌ ನಿಪುನ್‌ ಜಿಂದಾಲ್‌ ಆದೇಶ ನೀಡಿದ್ದಾರೆ.

ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ ರೋಹೊತ್‌ ರಾಠೋರ್‌ ಅವರು ಘಟನೆಯ ಕುರಿತು ತನಿಖೆ ನಡೆಸಲಿದ್ದಾರೆ. 15 ದಿನಗಳ ಒಳಗೆ ಜಿಲ್ಲಾ ಮ್ಯಾಜಿಸ್ಟ್ರೇಟರ್‌ ಅವರಿಗೆ ವರದಿ ನೀಡಲಿದ್ದಾರೆ ಎಂದು ಅಧಿಕಾರಿಗಳು ಹೇಳಿದರು. ಈ ರೈಲು ಸೇತುವೆಯನ್ನು 1928ರಲ್ಲಿ ಬ್ರಿಟಿಷರು ನಿರ್ಮಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.