ADVERTISEMENT

ವಿಜಯ ದಿವಸ 50ನೇ ವರ್ಷಾಚರಣೆ: ಒಗ್ಗಟ್ಟಿನ ಹೋರಾಟ ಸ್ಮರಿಸಿದ ಪ್ರಧಾನಿ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಡಿಸೆಂಬರ್ 2021, 5:48 IST
Last Updated 16 ಡಿಸೆಂಬರ್ 2021, 5:48 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: 1971ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಯುದ್ಧದಲ್ಲಿ ಭಾರತ ವಿಜಯ ಸಾಧಿಸಿದ 50ನೇ ವರ್ಷಾಚರಣೆಯಅಂಗವಾಗಿ ಮುಕ್ತಿಜೋದ್ಧರು, ವೀರಾಂಗಣರು ಮತ್ತು ಭಾರತೀಯ ಸಶಸ್ತ್ರ ಪಡೆಗಳ ಬಲಿದಾನ ಹಾಗೂ ಒಗ್ಗಟ್ಟಿನ ಹೋರಾಟವನ್ನು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದ್ದಾರೆ.

'50ನೇ ವಿಜಯ ದಿವಸದಲ್ಲಿ ನಾನು ಮುಕ್ತಿಜೋದ್ಧರು, ವೀರಾಂಗಣರು ಮತ್ತು ಭಾರತೀಯ ಸಶಸ್ತ್ರ ಪಡೆಗಳ ಧೀರ ಯೋಧರ ಶೌರ್ಯ ಹಾಗೂ ಬಲಿದಾನವನ್ನು ಸ್ಮರಿಸುತ್ತೇನೆ. ನಾವೆಲ್ಲರೂ ಒಗ್ಗಟ್ಟಾಗಿ ದಬ್ಬಾಳಿಕೆ ಶಕ್ತಿಯನ್ನು ಸೋಲಿಸಿದ್ದೇವೆ. ಢಾಕಾದಲ್ಲಿ ರಾಷ್ಟ್ರಪತಿ ಅವರ ಉಪಸ್ಥಿತಿಯು ಪ್ರತಿಯೊಬ್ಬ ಭಾರತೀಯನಿಗೂ ವಿಶೇಷ ಮಹತ್ವದ್ದಾಗಿದೆ' ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಬಾಂಗ್ಲಾದೇಶ ವಿಮೋಚನೆಗಾಗಿ 1971 ಡಿಸೆಂಬರ್ 3ರಿಂದ 16ರ ವರೆಗೆ ಪಾಕಿಸ್ತಾನ ವಿರುದ್ಧ ಬಾರತ ಯುದ್ಧ ನಡೆಸಿತ್ತು.ಯುದ್ಧದಲ್ಲಿ ಸೋಲು ಅನುಭವಿಸಿದ್ದ ಪಾಕಿಸ್ತಾನವು ಶರಣಾಗಿತ್ತು. ಬಾಂಗ್ಲಾ ವಿಮೋಚನೆಯ 50ನೇ ವರ್ಷಾಚರಣೆಯ ಸಂಭ್ರಮದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ರಾಮನಾಥ ಕೋವಿಂದ್ ಢಾಕಾಗೆ ತೆರಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.