ಕೋಲ್ಕತ್ತ: ತ್ರಿವಳಿ ತಲಾಖ್ ಪ್ರಕರಣದ ಐವರು ಅರ್ಜಿದಾರರಲ್ಲಿ ಒಬ್ಬರಾಗಿರುವ ಇಶ್ರತ್ ಜಹಾನ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಪಶ್ಚಿಮ ಬಂಗಾಳದ ಬಿಜೆಪಿ ಹೌರಾ ಜಿಲ್ಲಾ ಘಟಕ ಶನಿವಾರ ಇಶ್ರತ್ ಅವರನ್ನು ಶನಿವಾರ ಪಕ್ಷಕ್ಕೆ ಬರ ಮಾಡಿಕೊಂಡಿದೆ.
2014ರಲ್ಲಿ ಇಶ್ರತ್ ಅವರ ಪತಿ ದುಬೈನಿಂದ ದೂರವಾಣಿಯಲ್ಲಿ ‘ತಲಾಖ್’ ಎಂದು ಮೂರು ಬಾರಿ ಹೇಳಿ ಅವರಿಗೆ ವಿಚ್ಛೇದನ ನೀಡಿದ್ದರು.
‘ಇಶ್ರತ್ ಅವರನ್ನು ಪಕ್ಷಕ್ಕೆ ಸ್ವಾಗತಿಸಲು ಶೀಘ್ರ ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗುವುದು’ ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸಯಂತನ್ ಬಸು ಹೇಳಿದ್ದಾರೆ.
ಉಲುಬೇರಿಯಾ ಲೋಕಸಭಾ ಕ್ಷೇತ್ರಕ್ಕೆ ಜನವರಿ 29ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಅವರು ಪಕ್ಷದ ಅಭ್ಯರ್ಥಿಯಾಗಲಿದ್ದಾರೆಯೇ ಎಂಬ ಪ್ರಶ್ನೆಗೆ ಬಸು ಉತ್ತರಿಸಲಿಲ್ಲ.
ಈ ಚುನಾವಣೆಗಾಗಿ ತೃಣಮೂಲ ಕಾಂಗ್ರೆಸ್ ಮತ್ತು ಸಿಪಿಎಂ ತಮ್ಮ ಅಭ್ಯರ್ಥಿಗಳ ಹೆಸರನ್ನು ಈಗಾಗಲೇ ಪ್ರಕಟಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.