ADVERTISEMENT

ಕಾಂಗ್ರೆಸ್‌ನಿಂದ ರಾಜಕೀಯ: ಬಿಜೆಪಿ

​ಪ್ರಜಾವಾಣಿ ವಾರ್ತೆ
Published 12 ಜನವರಿ 2018, 19:30 IST
Last Updated 12 ಜನವರಿ 2018, 19:30 IST

ನವದೆಹಲಿ: ಸುಪ್ರೀಂ ಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳು ಮುಖ್ಯ ನ್ಯಾಯಮೂರ್ತಿ ವಿರುದ್ಧ ಮಾಡಿರುವ ಆರೋಪ ‘ಆಂತರಿಕ ವಿಚಾರ’. ಅದನ್ನು ರಾಜಕೀಯಗೊಳಿಸಲು ಕಾಂಗ್ರೆಸ್‌ ಯತ್ನಿಸುತ್ತಿದೆ ಎಂದು ಬಿಜೆಪಿ ಹೇಳಿದೆ.

‘ಜನರಿಂದ ತಿರಸ್ಕೃತವಾಗಿರುವ, ಚುನಾವಣೆ ಗೆಲ್ಲಲಾಗದ ಕಾಂಗ್ರೆಸ್‌ ಪಕ್ಷವು ಬೇರೆಡೆ ಅವಕಾಶಗಳಿಗಾಗಿ ಹುಡುಕುತ್ತಿರುವುದು ನಮಗೆ ಆಶ್ಚರ್ಯ ಮತ್ತು ಬೇಸರ ಉಂಟು ಮಾಡಿದೆ’ ಎಂದು ಬಿಜೆಪಿ ವಕ್ತಾರ ಸಂಬಿತ್‌ ಪಾತ್ರ ಹೇಳಿದ್ದಾರೆ.

ಕೆಲವು ರಾಜಕೀಯ ಪಕ್ಷಗಳು ನ್ಯಾಯಾಂಗದ ಆಂತರಿಕ ವಿಚಾರವನ್ನು ಸಾರ್ವಜನಿಕಗೊಳಿಸುತ್ತಿವೆ ಎಂದೂ ಅವರು ಆರೋಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.