ನವದೆಹಲಿ: ಪ್ರಕರಣಗಳ ಹಂಚಿಕೆ ಸೇರಿದಂತೆ ಕೆಲವು ಆಡಳಿತಾತ್ಮಕ ವಿಚಾರಗಳ ಸಂಬಂಧ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ವಿರುದ್ಧ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಬಹಿರಂಗವಾಗಿ ಅತೃಪ್ತಿ ಹೊರಹಾಕಿದ್ದರಿಂದ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಮುಂದಾಗಿರುವ ವಕೀಲರ ಪ್ರಮುಖ ಸಂಘಟನೆ ಸದಸ್ಯರು ಹಾಗೂ ಅಧ್ಯಕ್ಷರು ಭಾನುವಾರ ನ್ಯಾಯಮೂರ್ತಿ ಜೆ. ಚಲಮೇಶ್ವರ್ ಅವರ ನಿವಾಸಕ್ಕೆ ಬೇಡಿ ನೀಡಿದ್ದಾರೆ.
ಬಿಕ್ಕಟ್ಟು ಶಮನಕ್ಕೆ ಭಾರತೀಯ ವಕೀಲರ ಪರಿಷತ್ತು (ಬಿಸಿಐ) ಮತ್ತು ಸುಪ್ರೀಂ ಕೋರ್ಟ್ನ ವಕೀಲರ ಒಕ್ಕೂಟ (ಎಸ್ಸಿಬಿಎ) ಶನಿವಾರ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದವು.
ಇಂದು ಬೆಳಿಗ್ಗೆ ಬಿಸಿಐನ ಸದಸ್ಯರು ಸೇರಿದಂತೆ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರು ಸುಪ್ರೀಂ ಕೋರ್ಟ್ನ ಎರಡನೇ ಅತ್ಯಂತ ಹಿರಿಯ ನ್ಯಾಯಮೂರ್ತಿ ಜೆ. ಚಲಮೇಶ್ವರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.