ಶ್ರೀನಗರ: ಗಡಿಯೊಳಗೆ ನುಸುಳಲು ಪ್ರಯತ್ನಿಸಿದ್ದ ಜೈಷ್–ಎ–ಮೊಹಮ್ಮದ್ ಸಂಘಟನೆಗೆ ಸೇರಿದ ಐವರು ಉಗ್ರರನ್ನು ಉರಿ ವಲಯದ ಬರಮುಲ್ಲಾ ಜಿಲ್ಲೆಯ ದುಲಂಜಾ ಗ್ರಾಮದಲ್ಲಿ ಭಾರತೀಯ ಸೇನೆ ಹೊಡೆದುರುಳಿಸಿದೆ.
ಜಮ್ಮು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನೆ, ಕೇಂದ್ರೀಯ ಸಶಸ್ತ್ರ ಅರೆಸೇನಾ ಪಡೆ(ಸಿಎಪಿಎಫ್) ನಡೆಸಿದ ಕಾರ್ಯಾಚರಣೆಯಲ್ಲಿ ಗುಂಡೇಟಿಗೆ ಉಗ್ರರು ಬಲಿಯಾಗಿದ್ದಾರೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಶೇಶ್ ಪೌಲ್ ವೈದ್ ತಿಳಿಸಿದ್ದಾರೆ.
ಉರಿ ವಲಯದ ಸುತ್ತಮುತ್ತ ಹಲವು ಉಗ್ರರು ಅಡಗಿರುವ ಶಂಕೆಯಿದೆ. ಈಗಾಗಲೇ ಐದು ಮೃತದೇಹ ಪತ್ತೆಯಾಗಿದೆ. ಆರನೇ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರೆದಿದೆ ಎಂದು ವೈದ್ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.