ನವದೆಹಲಿ: ಲಾಭದಾಯಕ ಹುದ್ದೆ ಹೊಂದಿದ್ದಾರೆ ಎಂಬ ಆರೋಪದ ಮೆರೆಗೆ ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಚುನಾವಣಾ ಆಯೋಗವು ಅನರ್ಹಗೊಳಿಸಿರುವ ಕ್ರಮಕ್ಕೆ ತಾತ್ಕಾಲಿಕ ತಡೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ಈ ಪ್ರಕರಣ ಸಂಬಂಧ ಶುಕ್ರವಾರ ಚುನಾವಣಾ ಆಯೋಗದ ಕ್ರಮಕ್ಕೆ ತಾತ್ಕಾಲಿಕ ತಡೆ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ತಡೆ ನೀಡಲು ನಿರಾಕರಿಸಿದೆ.
ಎಎಪಿಯ 20 ಶಾಸಕರನ್ನು ಆಯೋಗವು ಅನರ್ಹಗೊಳಿಸಿ, ಈ ಕ್ರಮವನ್ನು ಅನುಮೋದಿಸಲು ರಾಷ್ಟ್ರಪತಿಗೆ ಪಟ್ಟಿ ಕಳುಹಿಸಿದೆ.
2015ರಲ್ಲಿ ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಎಎಪಿ 70 ಕ್ಷೇತ್ರಗಳಲ್ಲಿ 67ರಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿತ್ತು. ಆ ಬಳಿಕ ಗೆದ್ದ ಪ್ರತಿನಿಧಿಗಳ ಮೇಲೆ ಬಿಜೆಪಿ ಆರೋಪಗಳನ್ನು ಮಾಡುತ್ತಲೇ ಬರುತ್ತಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.