ADVERTISEMENT

ಯುವ ಮತದಾರರನ್ನು ಸೆಳೆಯಲು ಬಿಜೆಪಿ ‘ಯುವ ಉದ್ಘೋಷ್ ಕಾರ್ಯಕ್ರಮ’

​ಪ್ರಜಾವಾಣಿ ವಾರ್ತೆ
Published 20 ಜನವರಿ 2018, 4:44 IST
Last Updated 20 ಜನವರಿ 2018, 4:44 IST
ಯುವ ಮತದಾರರನ್ನು ಸೆಳೆಯಲು ಬಿಜೆಪಿ ‘ಯುವ ಉದ್ಘೋಷ್ ಕಾರ್ಯಕ್ರಮ’
ಯುವ ಮತದಾರರನ್ನು ಸೆಳೆಯಲು ಬಿಜೆಪಿ ‘ಯುವ ಉದ್ಘೋಷ್ ಕಾರ್ಯಕ್ರಮ’   

ವಾರಣಾಸಿ: 2019ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯುವ ಮತದಾರರನ್ನು ಸೆಳೆಯಲು ಬಿಜೆಪಿ ‘ಯುವ ಉದ್ಘೋಷ್ ಕಾರ್ಯಕ್ರಮ’ ಹಮ್ಮಿಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಾಣಸಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಿದ್ದಾರೆ. ಸುಮಾರು 17,000 ಯುವಕರನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಮತ್ತು ಅಲ್ಲಿನ ಬಿಜೆಪಿ ರಾಜ್ಯಾಧ್ಯಕ್ಷ  ಮಹೇಂದ್ರನಾಥ ಪಾಂಡೆ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸದ್ಯ 17 ವರ್ಷ ಪೂರ್ಣಗೊಂಡಿರುವ, ಮುಂದಿವ ವರ್ಷ ಮತದಾನಕ್ಕೆ ಅರ್ಹತೆ ಪಡೆಯುವ ಯುವಕರನ್ನು ಪಕ್ಷದತ್ತ ಸೆಳೆಯುವುದು ಬಿಜೆಪಿಯ ಗುರಿ ಎನ್ನಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.