ADVERTISEMENT

ಪುದುಚೇರಿಯಲ್ಲೂ ‘ಲಾಭದಾಯಕ ಹುದ್ದೆ’ ಸದ್ದು

​ಪ್ರಜಾವಾಣಿ ವಾರ್ತೆ
Published 20 ಜನವರಿ 2018, 19:30 IST
Last Updated 20 ಜನವರಿ 2018, 19:30 IST
ಪುದುಚೇರಿಯಲ್ಲೂ ‘ಲಾಭದಾಯಕ ಹುದ್ದೆ’ ಸದ್ದು
ಪುದುಚೇರಿಯಲ್ಲೂ ‘ಲಾಭದಾಯಕ ಹುದ್ದೆ’ ಸದ್ದು   

ಪುದುಚೇರಿ: ಲಾಭದಾಯಕ ಹುದ್ದೆ ಹೊಂದಿದ ಆಡಳಿತಾರೂಢ ಕಾಂಗ್ರೆಸ್‌ ಮತ್ತು ಡಿಎಂಕೆ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲು ವಿರೋಧ ಪಕ್ಷ ಎಐಎಡಿಎಂಕೆ ಶನಿವಾರ ನಿರ್ಧರಿಸಿದೆ.

ಆಮ್‌ ಆದ್ಮಿ ಪಕ್ಷದ 20 ಶಾಸಕರ ಅನರ್ಹತೆಗೆ ಚುನಾವಣಾ ಆಯೋಗ ಶಿಫಾರಸು ಮಾಡಿದ ಬೆನ್ನಲ್ಲೇ ಎಐಎಡಿಎಂಕೆ ಈ ನಿರ್ಧಾರ ತೆಗೆದುಕೊಂಡಿದೆ.

ಲಾಭದಾಯಕ ಹುದ್ದೆಗಳಿಗೆ ರಾಜೀನಾಮೆ ನೀಡುವಂತೆ ಎರಡೂ ಪಕ್ಷಗಳ ಶಾಸಕರಿಗೆ ಎಐಎಡಿಎಂಕೆ 15 ದಿನಗಳ ಗಡುವು ನೀಡಿದೆ. ಇಲ್ಲದಿದ್ದರೆ ಆಯೋಗಕ್ಕೆ ಪತ್ರ ಬರೆಯುವುದಾಗಿ ಎಚ್ಚರಿಕೆ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.