ADVERTISEMENT

ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ: ನಾಲ್ವರು ಪೊಲೀಸರು ಸಾವು

ಏಜೆನ್ಸೀಸ್
Published 24 ಜನವರಿ 2018, 14:26 IST
Last Updated 24 ಜನವರಿ 2018, 14:26 IST
ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ: ನಾಲ್ವರು ಪೊಲೀಸರು ಸಾವು
ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ: ನಾಲ್ವರು ಪೊಲೀಸರು ಸಾವು   

ರಾಯಪುರ: ಚತ್ತೀಸಗಡದ ನಾರಾಯಣ್‌ಪುರ ಜಿಲ್ಲೆಯಲ್ಲಿ ಮಾವೋವಾದಿ ಹಾಗೂ ಪೊಲೀಸರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ಹಾಗೂ ಇಬ್ಬರು ಪೊಲೀಸರು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ.

ಇಲ್ಲಿನ ಇರ್ಪಾನರ್‌ ಅರಣ್ಯದಲ್ಲಿ ವಿಶೇಷ ಪೊಲೀಸ್ ಕಾರ್ಯಪಡೆ ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಿತ್ತು.  ಘಟನೆಯಲ್ಲಿ ನಾಲ್ವರು ಪೊಲೀಸರು ಮೃತಪಟ್ಟಿದ್ದು 7 ಜನರು ಗಾಯಗೊಂಡಿದ್ದಾರೆ.  ಗಾಯಗೊಂಡವರನ್ನು ರಾಯಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಬೆಳಿಗ್ಗೆ ಸುಮಾರು 11 ಗಂಟೆ ಗುಂಡಿನ ಚಕಮಕಿ ಆರಂಭವಾಗಿತ್ತು.  ಎರಡು ಗಂಟೆಗಳ ಕಾಲ ನಿರಂತರ ದಾಳಿ, ಪ್ರತಿದಾಳಿ ನಡೆಯಿತು ಎಂದು ಐಜಿಪಿ ವಿವೇಕಾನಂದ ಸಿಂಹ ಅವರು ಹೇಳಿದ್ದಾರೆ. 

ADVERTISEMENT

ಮಾವೋವಾದಿಗಳ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.