ADVERTISEMENT

ಮುಸ್ಲಿಮರನ್ನು ಕೊಂದವರು, ದಲಿತರನ್ನು ಸುಟ್ಟವರು ಈಗ ನಮ್ಮ ಮನೆ, ಮಕ್ಕಳಿಗೂ ಅಪಾಯಕಾರಿಯಾಗಿದ್ದಾರೆ: ಕೇಜ್ರಿವಾಲ್‌

ಏಜೆನ್ಸೀಸ್
Published 25 ಜನವರಿ 2018, 13:26 IST
Last Updated 25 ಜನವರಿ 2018, 13:26 IST
ಮುಸ್ಲಿಮರನ್ನು ಕೊಂದವರು, ದಲಿತರನ್ನು ಸುಟ್ಟವರು ಈಗ ನಮ್ಮ ಮನೆ, ಮಕ್ಕಳಿಗೂ ಅಪಾಯಕಾರಿಯಾಗಿದ್ದಾರೆ: ಕೇಜ್ರಿವಾಲ್‌
ಮುಸ್ಲಿಮರನ್ನು ಕೊಂದವರು, ದಲಿತರನ್ನು ಸುಟ್ಟವರು ಈಗ ನಮ್ಮ ಮನೆ, ಮಕ್ಕಳಿಗೂ ಅಪಾಯಕಾರಿಯಾಗಿದ್ದಾರೆ: ಕೇಜ್ರಿವಾಲ್‌   

ನವದೆಹಲಿ: ಪದ್ಮಾವತ್‌ ಸಿನಿಮಾ ಬಿಡುಗಡೆ ವಿರೋಧಿಸಿ ಹೋರಾಟ ನಡೆಸುವ ವೇಳೆ ಗುರುಗ್ರಾಮದಲ್ಲಿ ಖಾಸಗಿ ಶಾಲೆಯ ಎರಡು ಬಸ್‌ಗಳ ಮೇಲೆ ದಾಳಿ ನಡೆಸಿರುವುದನ್ನು ಕಟುವಾಗಿ ಟೀಕಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ‘ಮುಸ್ಲಿಮರನ್ನು ಕೊಂದವರು, ದಲಿತರನ್ನು ಸುಟ್ಟವರು ಈಗ ನಮ್ಮ ಮನೆ, ಮಕ್ಕಳಿಗೂ ಅಪಾಯಕಾರಿಯಾಗಿದ್ದಾರೆ’ ಎಂದು ಹೇಳಿದ್ದಾರೆ.

ಇನ್ನು ಮೌನವಾಗಿರಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ‘ನಾನು ಪ್ರತಿಯೊಬ್ಬರಲ್ಲೂ ಕೇಳಿಕೊಳ್ಳುತ್ತೇನೆ. ಈ ದಿನ ಅವರು ನಮ್ಮ ಮಕ್ಕಳಿಗೆ ಕಲ್ಲಿನಿಂದ ಹೊಡೆಯಲು ಆರಂಭಿಸಿದ್ದಾರೆ. ನಮ್ಮ ಮನೆಯೊಳಗೆ ನುಸುಳಲು ಆರಂಭಿಸಿದ್ದಾರೆ. ಇನ್ನು ಸುಮ್ಮನಿರ ಬೇಡಿ. ಮಾತನಾಡಿ’ ಎಂದು ದೆಹಲಿಯ ಛತ್ರಶಾಲ್‌ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಪದ್ಮಾವತ್‌ ಸಿನಿಮಾ ಬಿಡುಗಡೆ ವಿರೋಧಿಸಿ ಬುಧವಾರ ಪ್ರತಿಭಟನೆ ನಡೆಸುವ ವೇಳೆ ಪತ್ರಿಭಟನಾಕಾರರು ಎರಡು ಖಾಸಗಿ ಶಾಲಾ ಬಸ್‌ಗಳ ಮೇಲೆ ದಾಳಿ ನಡೆಸಿದ್ದರು. ಈ ಘಟನೆ ವೇಳೆ ಶಾಲಾ ಮಕ್ಕಳು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.