ನವದೆಹಲಿ: ಮಹಿಳೆಯರು ಎಲ್ಲ ಕ್ಷೇತ್ರದಲ್ಲಿಯೂ ಪ್ರಗತಿ ಸಾಧಿಸುತ್ತಿದ್ದಾರೆ. ಮಹಿಳೆಯರನ್ನು ಗೌರವಿಸುವುದು ನಮ್ಮ ಸಂಸ್ಕೃತಿ ಎಂದು ಪ್ರಧಾನಿ ನರೇಂದ್ರ ಮೋದಿ ಮನದ ಮಾತು ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಈ ವರ್ಷದ ಮೊದಲ ಮನದ ಮಾತು ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಭಾರತದ ಮೊದಲ ಗಗನಯಾತ್ರಿ ಕಲ್ಪನಾ ಚಾವ್ಲಾ ಅವರನ್ನು ಸ್ಮರಿಸಿದ್ದಾರೆ. ಕಲ್ಪನಾ ಚಾವ್ಲಾ ಅವರು ಎಲ್ಲ ಭಾರತೀಯರಿಗೆ ವಿಶೇಷವಾಗಿ ಯುವ ಜನಾಂಗಕ್ಕೆ ಅವರು ಉತ್ತಮ ಸಂದೇಶವನ್ನೇ ನೀಡಿ ಹೋಗಿದ್ದಾರೆ ಎಂದಿದ್ದಾರೆ.
ಫೆಬ್ರುವರಿ 1ರಂದು ಕಲ್ಪನಾ ಪುಣ್ಯತಿಥಿ. ಮಹಿಳೆಯೊಬ್ಬಳಿಗೆ ಗಟ್ಟಿ ನಿರ್ಧಾರವಿದ್ದರೆ, ಅಸಾಧ್ಯವಾದುದು ಏನೂ ಇಲ್ಲ ಎಂಬುದು ಕಲ್ಪನಾ ನೀಡಿದ ಸಂದೇಶ ಎಂದಿದ್ದಾರೆ ಮೋದಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.