ADVERTISEMENT

ರೈತರ ಆದಾಯ ಮೇಲೆ ಹವಾಮಾನ ಬದಲಾವಣೆ ಬರೆ: ಆರ್ಥಿಕ ಸಮೀಕ್ಷೆ

ಏಜೆನ್ಸೀಸ್
Published 29 ಜನವರಿ 2018, 10:34 IST
Last Updated 29 ಜನವರಿ 2018, 10:34 IST
ರೈತರ ಆದಾಯ ಮೇಲೆ ಹವಾಮಾನ ಬದಲಾವಣೆ ಬರೆ: ಆರ್ಥಿಕ ಸಮೀಕ್ಷೆ
ರೈತರ ಆದಾಯ ಮೇಲೆ ಹವಾಮಾನ ಬದಲಾವಣೆ ಬರೆ: ಆರ್ಥಿಕ ಸಮೀಕ್ಷೆ   

ನವದೆಹಲಿ: ಹವಾಮಾನ ಬದಲಾವಣೆಯ ವ್ಯತಿರಿಕ್ತ ಪರಿಣಾಮದಿಂದ ರೈತರ ಆದಾಯದಲ್ಲಿ ಇಳಿಕೆಯಾಗಬಹುದೆಂದು 2017–18ನೇ ಸಾಲಿನ ಆರ್ಥಿಕ ಸಮೀಕ್ಷೆ ಎಚ್ಚರಿಸಿದೆ.

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸೋಮವಾರ ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆ ಮಂಡಿಸಿದರು.

ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವುದು, ನೀರಾವರಿಯಲ್ಲಿ ಆಗಬೇಕಾದ ಅಭಿವೃದ್ಧಿ ಹಾಗೂ ನೂತನ ತಂತ್ರಜ್ಞಾನದ ಸಮರ್ಥ ಬಳಕೆ ಕುರಿತು ಆರ್ಥಿಕ ಸಮೀಕ್ಷೆ ಸಲಹೆ ನೀಡಿದೆ.

ADVERTISEMENT

ಹವಾಮಾನ ಬದಲಾವಣೆಯ ಪರಿಣಾಮದಿಂದ ರೈತರ ವಾರ್ಷಿಕ ಆದಾಯದಲ್ಲಿ ಶೇ 15–18ರಷ್ಟು ಹಾಗೂ ನೀರಾವರಿ ಇರದ ಪ್ರದೇಶದಲ್ಲಿ ಶೇ 20–25ರಷ್ಟು ಇಳಿಕೆಯಾಗುವ ಸಾಧ್ಯತೆ ಇರುವುದಾಗಿ ಹೇಳಿದೆ.

ಅಂತರ್ಜಲ ಮೂಲಗಳು ಬರಿದಾಗುತ್ತಿರುವುದು, ಹೆಚ್ಚುತ್ತಿರುವ ನೀರಿನ ಕೊರತೆಗೆ ಪರಿಹಾರವಾಗಿ ದೇಶದಲ್ಲಿ ನೀರಾವರಿ ಪ್ರದೇಶ ವಿಸ್ತರಿಸುವ ಅಗತ್ಯವಿದೆ.

ಪ್ರಸ್ತುತ ಒಟ್ಟು ಕೃಷಿ ಭೂಮಿಯಲ್ಲಿ ಶೇ 45ರಷ್ಟು ನೀರಾವರಿ ಹೊಂದಿದೆ. ನೀರಾವರಿ ಇರದ ಕರ್ನಾಟಕ, ಮಹಾರಾಷ್ಟ್ರ, ಮಧ್ಯ ಪ್ರದೇಶ, ರಾಜಸ್ಥಾನ, ಚತ್ತೀಸ್‌ಗಢ ಹಾಗೂ ಜಾರ್ಖಂಡ್‌ನ ಕೆಲ ಭಾಗಗಳು ಬಹುಬೇಗ ಹವಾಮಾನ ಬದಲಾವಣೆಯ ಪರಿಣಾಮಕ್ಕೆ ಒಳಗಾಗುತ್ತಿರುವುದಾಗಿ ಪ್ರಸ್ತಾಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.