ಕಾಸ್ಗಂಜ್(ಉತ್ತರ ಪ್ರದೇಶ): ಗಣರಾಜ್ಯೋತ್ಸವ ದಿನದಂದು ಎರಡು ಕೋಮಿನ ಗುಂಪುಗಳ ನಡುವೆ ನಡೆದಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸ್ಗಂಜ್ ಜಿಲ್ಲಾ ಪೊಲೀಸರು 81 ಜನರನ್ನು ಬಂಧಿಸಿದ್ದರು. ಇದಕ್ಕೆ ಪ್ರತಿಯಾಗಿ ಎರಡೂ ಧರ್ಮಗಳ ಬಂಧಿತರ ಕುಟುಂಬದವರು ಒಟ್ಟಾಗಿ ಸೇರಿ ಬಿಡುಗಡೆಗೆ ಆಗ್ರಹಿಸಿದರು. ಇದು ಮಾನವೀಯ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಕುರಿತು ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ.
ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಹೆಚ್ಚಿನವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ಬಂಧನಕ್ಕೊಳಗಾಗಿರುವ ಎರಡೂ ಧರ್ಮದವರ ಕುಟುಂಬದವರು ಬಿಡುಗಡೆಗಾಗಿ ಆಗ್ರಹಿಸಿ ಠಾಣೆ ಎದುರು ಜಮಾಯಿಸಿದ್ದಾರೆ.
ಸದ್ಯ ಈ ಸಂಬಂಧ ಬಂಧನಕ್ಕೊಳಗಾಗಿರುವ ರೈಲ್ವೆ ಪಾಠಕ್ ಕಾಲೊನಿಯ ಕೂಲಿ ಕಾರ್ಮಿಕ ಮತೀನ್ ಖಾನ್(27) ಅವರ ತಾಯಿ ಜಮೀನಿ ಬೇಗಂ ಹಾಗೂ 18 ವರ್ಷದ ಹಿಂದೂ ಯುವಕ ಜೋಗಿಂದರ್ ಅವರ ತಾಯಿ ರಮಾದೇವಿ ಅವರು ಅಕ್ಕಪಕ್ಕದಲ್ಲಿ ಕುಳಿತು ತಮ್ಮ ಮಕ್ಕಳ ಬಿಡುಗಡೆಗಾಗಿ ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.