ADVERTISEMENT

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ 70ನೇ ಪುಣ್ಯತಿಥಿ: ಗಣ್ಯರಿಂದ ಪುಷ್ಪ ನಮನ

​ಪ್ರಜಾವಾಣಿ ವಾರ್ತೆ
Published 30 ಜನವರಿ 2018, 5:22 IST
Last Updated 30 ಜನವರಿ 2018, 5:22 IST
ಮಹಾತ್ಮ ಗಾಂಧೀಜಿ
ಮಹಾತ್ಮ ಗಾಂಧೀಜಿ   

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 70ನೇ ಪುಣ್ಯತಿಥಿ ಪ್ರಯುಕ್ತ ದೇಶದಾದ್ಯಂತ ವಿವಿಧ ವಿಧಾಯಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

*

ದೆಹಲಿಯ ರಾಜಘಾಟ್‌ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸೇರಿದಂತೆ ಅನೇಕ ಗಣ್ಯರು ಗಾಂಧೀಜಿ ಅವರಿಗೆ ಪುಷ್ಪನಮನ ಸಲ್ಲಿಸಿದರು.

ADVERTISEMENT

ಗುಜರಾತಿನ ಸಾಬರಮತಿ ಅಶ್ರಮದಲ್ಲಿ ಸರ್ವ ಧರ್ಮ ಪ್ರಾರ್ಥನೆ, ಭಕ್ತಿಗೀತೆಗಳ ಗಾಯನ ಜರುಗಿತು.

 

(ಎಎನ್‌ಐ ಚಿತ್ರಗಳು)

ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್‌ನಲ್ಲಿ ಮಹಾತ್ಮ ಗಾಂಧೀಜಿ ಅವರ 70ನೇ ಪುಣ್ಯತಿಥಿಯನ್ನು ಸ್ಮರಿಸಿದ್ದಲ್ಲದೆ, ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.