ADVERTISEMENT

ಆಯೋಗದಿಂದ ವಿವರಣೆ ಕೋರಿದ ದೆಹಲಿ ಹೈಕೋರ್ಟ್

ಎಎಪಿಯ 20 ಶಾಸಕರ ಅನರ್ಹತೆ ಪ್ರಕರಣ

ಪಿಟಿಐ
Published 30 ಜನವರಿ 2018, 19:30 IST
Last Updated 30 ಜನವರಿ 2018, 19:30 IST

ನವದೆಹಲಿ : ದೆಹಲಿ ವಿಧಾನಸಭೆಯ ಎಎಪಿಯ 20 ಶಾಸಕರನ್ನು ಅನರ್ಹಗೊಳಿಸಲು ಕಾರಣವೇನು ಎಂಬ ಬಗ್ಗೆ ವಿವರಣೆ ನೀಡುವಂತೆ ಚುನಾವಣಾ ಆಯೋಗಕ್ಕೆ ದೆಹಲಿ ಹೈಕೋರ್ಟ್‌ ಸೂಚಿಸಿದೆ.

ಅನರ್ಹತೆ ಪ್ರಶ್ನಿಸಿ ಎಎಪಿ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ನ ದ್ವಿಸದಸ್ಯ ಪೀಠವು ಮಂಗಳವಾರ ವಿಚಾರಣೆಗೆ ಕೈಗೆತ್ತಿಕೊಂಡಿತು.

ಈ ಕುರಿತು ಫೆಬ್ರುವರಿ 7ರ ಒಳಗಾಗಿ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸುವಂತೆಯೂ ಆಯೋಗಕ್ಕೆ ತಾಕೀತು ಮಾಡಿದೆ.

ADVERTISEMENT

ಸಂಸದೀಯ ಕಾರ್ಯದರ್ಶಿಗಳಾಗಿ ನೇಮಕವಾದ ಎಎಪಿಯ 20 ಶಾಸಕರನ್ನು ಅನರ್ಹಗೊಳಿಸುವಂತೆ ರಾಷ್ಟ್ರಪತಿಗೆ ತಾನು ಮಾಡಿದ ಶಿಫಾರಸನ್ನು ಆಯೋಗ ಸಮರ್ಥಿಸಿಕೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.