ADVERTISEMENT

ಕಾಸ್‌ಗಂಜ್‌: ಚಂದನ್ ಗುಪ್ತಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಂಧನ

ಏಜೆನ್ಸೀಸ್
Published 31 ಜನವರಿ 2018, 10:03 IST
Last Updated 31 ಜನವರಿ 2018, 10:03 IST
ಸಲೀಮ್‌ ಜಾವೆದ್‌
ಸಲೀಮ್‌ ಜಾವೆದ್‌   

ಲಖನೌ: ‘ಉತ್ತರ ಪ್ರದೇಶದ ಕಸ್‌ಗಂಜ್‌ನಲ್ಲಿ ಶುಕ್ರವಾರ ಗಣರಾಜ್ಯೋತ್ಸವದಂದು ‘ತಿರಂಗಾ ಜಾಥಾ’ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ, ಕಲ್ಲುತೂರಾಟ ವೇಳೆ ನಡೆದಿದ್ದ ಚಂದನ್ ಗುಪ್ತಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಸಲೀಮ್‌ ಜಾವೆದ್‌ನನ್ನು ಪೊಲೀಸರು ಬಂಧಿಸಿದ್ದಾರೆ. 

ಪ್ರಕರಣ ಸಂಬಂಧ ತನಿಖೆ ನಡೆಸಿದ ಸ್ಥಳೀಯ ಪೊಲೀಸರು ಸಲೀಮ್‌ ಜಾವೆದ್‌ನನ್ನು ಬುಧವಾರ ಬಂಧಿಸಿದ್ದಾರೆ. ಈ ವಿಚಾರವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ಆರ್.ಪಿ ಸಿಂಗ್‌ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT