ನವದೆಹಲಿ: ಹವಾಯಿ ಚಪ್ಪಲಿ ತೊಟ್ಟುಕೊಳ್ಳುವವರಿಗೂ ವಿಮಾನಯಾನ ಮಾಡಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಒಂದು ಗಂಟೆಯ ಪ್ರಯಾಣಕ್ಕೆ ₹2500 ಟಿಕೆಟ್ ಬೆಲೆಯಾದರೆ ಸಾಮಾನ್ಯ ಜನರೂ ವಿಮಾನಯಾನ ಮಾಡಬಹುದಾಗಿದೆ ಎಂದು ಬಜೆಟ್ ಭಾಷಣದಲ್ಲಿ ಸಚಿವರು ಹೇಳಿದ್ದಾರೆ.
ಮುಂಬರುವ 10- 15 ವರ್ಷಗಳೊಳಗೆ ಪ್ರತೀ ವರ್ಷ 100 ಕೋಟಿ ಜನರಿಗೆ ವಿಮಾನ ಪ್ರಯಾಣ ನಡೆಸಲು ಅನುಕೂಲವಾಗುವಂತೆ ವಿಮಾನ ನಿಲ್ದಾಣಗಳ ಸೌಕರ್ಯವನ್ನು ಅಭಿವೃದ್ದಿ ಪಡಿಸಲಾಗುವುದು.
ದೇಶದ ಸಣ್ಣ ನಗರಗಳಿಗೂ ವಿಮಾನಯಾನ ಸೌಕರ್ಯಗಳನ್ನು ಕಲ್ಪಿಸುವುದಕ್ಕಾಗಿ ಉಡಾನ್ ಯೋಜನೆಗೆ ಉತ್ತೇಜನ ನೀಡಲಾಗಿದೆ. 56 ಹೊಸ ವಿಮಾನ ನಿಲ್ದಾಣಗಳು ಮತ್ತು 31 ಹೆಲಿಪ್ಯಾಡ್ಗಳು ಉಡಾನ್ ಯೋಜನೆಯಡಿಯಲ್ಲಿ ಸೇರ್ಪಡೆ ಮಾಡಲಾಗುವುದು.ಈಗಾಗಲೇ 16 ವಿಮಾನ ನಿಲ್ದಾಣಗಳನ್ನು ಈ ಯೋಜನೆಯಡಿಯಲ್ಲಿ ಸೇರ್ಪಡೆ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.