ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದಿನ್ ಒವೈಸಿ ನೇತೃತ್ವದ ಅಖಿಲ ಭಾರತ ಮಜ್ಲಿಸ್ –ಇ– ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ಜತೆ ಹೊಂದಾಣಿಕೆ ಮಾತುಕತೆ ನಡೆಸಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
ಅಲ್ಪಸಂಖ್ಯಾತರ ಮತಗಳು ಹರಿದು ಹಂಚಿ ಹೋಗದಂತೆ ತಡೆಯಲು ಕರ್ನಾಟಕ ಕಾಂಗ್ರೆಸ್ ಮುಖಂಡರು ಎಐಎಂಐಎಂ ಮುಖಂಡರ ಜತೆ ರಹಸ್ಯ ಮಾತುಕತೆ ನಡೆಸಿದ್ದಾರೆ ಎಂಬ ವರದಿಗಳನ್ನು ಎಐಸಿಸಿ ಕಾರ್ಯದರ್ಶಿ ಮಧುಗೌಡ ಯಕ್ಷಿ ತಳ್ಳಿ ಹಾಕಿದ್ದಾರೆ.
ಕಾಂಗ್ರೆಸ್ಗೆ ಬರುವ ಅಲ್ಪಸಂಖ್ಯಾತರ ಮತ ತಡೆಯಲು ಬಿಜೆಪಿಯೇ, ಒವೈಸಿ ಅವರೊಂದಿಗೆ ಕೈಜೋಡಿಸಿದೆ ಎಂದು ಅವರು ಆರೋಪಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.