ನೆಲ್ಲೂರು: ಪ್ರಯಾಣಿಕರೊಬ್ಬರು ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 4.658 ಕೆ.ಜಿ. ಬಂಗಾರವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್ಐ) ಅಧಿಕಾರಿಗಳು ಆಂಧ್ರಪ್ರದೇಶ ನೆಲ್ಲೂರಿನ ರೈಲು ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.
ಚಿನ್ನದೊಂದಿಗೆ ಗುವಾಹಟಿ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯಿಂದ ಭಾನುವಾರ ಈ ಚಿನ್ನವನ್ನು ವಶಕ್ಕೆ ಪಡೆಯಲಾಗಿದ್ದು, ಇದರ ಮೌಲ್ಯ ₹ 1,43,00,060 ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಭಾರೀ ಮೊತ್ತದ ಚಿನ್ನವನ್ನು ಎರಡು ಸ್ಟೌಗಳಲ್ಲಿ ಅಡಗಿಸಿ ಇಡಲಾಗಿತ್ತು ಎಂದು ವಿವರ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.