ADVERTISEMENT

ಮುಸ್ಲಿಮರಿಗೆ ಭದ್ರತೆ ಒದಗಿಸಲು ಮನವಿ: ರಾಷ್ಟ್ರಪತಿಗಳಿಗೆ ಪತ್ರ

ಏಜೆನ್ಸೀಸ್
Published 5 ಫೆಬ್ರುವರಿ 2018, 13:14 IST
Last Updated 5 ಫೆಬ್ರುವರಿ 2018, 13:14 IST
ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ (ಸಂಗ್ರಹ ಚಿತ್ರ)
ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ (ಸಂಗ್ರಹ ಚಿತ್ರ)   

ಆಗ್ರಾ: ಮುಸ್ಲಿಮರ ಭದ್ರತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಲ್ಲಿನ ಮುಸ್ಲಿಮರ ತಂಡವೊಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರಿಗೆ ಜಿಲ್ಲಾಡಳಿತದ ಮೂಲಕ ಮನವಿ ಪತ್ರ ಸಲ್ಲಿಸಿದೆ.

ಭದ್ರತೆಗೆ ಆಗ್ರಹಿಸಿ ಶಾಹಿದ್‌ ಸ್ಮಾರಕದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ‘ತಿರಂಗಾ ಯಾತ್ರೆ‘ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ನಿಷೇದಾಜ್ಞೆ ಜಾರಿಯಲ್ಲಿರುವುದರಿಂದ ಕೈಬಿಡಲಾಗಿದೆ ಎಂದು ಜಿಲ್ಲಾಧಿಕಾರಿಗಳನ್ನು ಭೇಟಿಯಾದ ನಿಯೋಗದಲ್ಲಿದ್ದ ಶಬಾನಾ ಖಂಡೇಲ್‌ವಾಲ್ ತಿಳಿಸಿದ್ದಾರೆ.

ಕಾಸ್‌ಗಂಜ್‌ ಗಲಭೆ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಮತ್ತು ಕೊಲೆಯಾಗಿರುವ ಚಂದನ್‌ ಗುಪ್ತಾ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದೂ ಮನವಿ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.