ಬೆಂಗಳೂರು: ಕೃಷ್ಣ ದೀಕ್ಷಿತ್ ಶ್ರೀಪಾದ, ಶಂಕರ ಗಣಪತಿ ಪಂಡಿತ್, ರಾಮಕೃಷ್ಣ ದೇವದಾಸ್, ಭೂತನಹೊಸೂರು ಮಲ್ಲಿಕಾರ್ಜುನ ಶ್ಯಾಮ್ಪ್ರಸಾದ್ ಹಾಗೂ ಸಿದ್ದಪ್ಪ ಸುನಿಲ್ ದತ್ ಯಾದವ್ ಅವರನ್ನು ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ.
‘ಈ ಐವರೂ ಬರುವ ಬುಧವಾರ (ಫೆ.14) ಅಥವಾ ಶನಿವಾರ (ಫೆ.17) ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆ ಇದೆ’ ಎಂದು ಹೈಕೋರ್ಟ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.