ADVERTISEMENT

ಗಡಿಯಲ್ಲಿ ಪಾಕಿಸ್ತಾನದ ಬಿಎಟಿಯಿಂದಿ ದಾಳಿ: ಇಬ್ಬರು ಯೋಧರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2018, 11:09 IST
Last Updated 19 ಫೆಬ್ರುವರಿ 2018, 11:09 IST
-ಸಾಂದರ್ಭಿಕ ಚಿತ್ರ
-ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಖಾರಿ ಕರ್ಮರ ವಲಯದಲ್ಲಿ ಅಂತರರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ‘ಬಾರ್ಡರ್ ಆ್ಯಕ್ಶನ್ ಟೀಮ್’ (ಬಿಎಟಿ) ಸಿಬ್ಬಂದಿ ಸೋಮವಾರ ನಸುಕಿನಲ್ಲಿ ನಡೆಸಿದ ದಾಳಿಯಲ್ಲಿ ನಮ್ಮ ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ.

ಒಬ್ಬ ನುಸುಳುಕೋರ ನಮ್ಮ ಸೈನಿಕರ ಗುಂಡೇಟಿಗೆ ಬಲಿಯಾಗಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಗಾಯಗೊಂಡ ಸೈನಿಕರನ್ನು ಉಧಂಪುರದಲ್ಲಿ ಆಸ್ಪತ್ರೆಗೆ ಸೇರಿಸಲಾಗಿದೆ.

ಬಿಎಟಿ ಎಂಬುದು ಭಾರತದೊಳಕ್ಕೆ ನುಸುಳಲು ಉಗ್ರಗಾಮಿಗಳಿಗೆ ಅನುಕೂಲ ಮಾಡಿಕೊಡಲು ಪಾಕಿಸ್ತಾನ ರಚಿಸಿದ ಪಡೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.