ಚೆನ್ನೈ: ಮದುರೆಯಲ್ಲಿ ಬುಧವಾರ (ಫೆ.21) ನಡೆಯಲಿರುವ ನಟ ಕಮಲ ಹಾಸನ್ ಅವರ ಹೊಸ ರಾಜಕೀಯ ಪಕ್ಷದ ಉದ್ಘಾಟನಾ ಸಮಾರಂಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭಾಗವಹಿಸಲಿದ್ದಾರೆ.
ಕಳೆದ ಸೆಪ್ಟೆಂಬರ್ನಲ್ಲಿ ನಡೆದಿದ್ದ ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಕಮಲ್ ಹಾಸನ್ ಅವರು ಹೊಸ ರಾಜಕೀಯ ಪಕ್ಷ ಆರಂಭಿಸುವ ಸುಳಿವು ನೀಡಿದ್ದರು. ಆ ಸಂದರ್ಭದಲ್ಲಿ ಮಾತನಾಡಿದ್ದ ಕೇಜ್ರಿವಾಲ್, ’ಎಲ್ಲೆಡೆ ಭ್ರಷ್ಟಾಚಾರ ತಾಂಡವವಾಡುತ್ತಿರುವ ಸಂದರ್ಭದಲ್ಲಿ ಇಂಥದ್ದೊಂದು ಹೆಜ್ಜೆ ಅವಶ್ಯಕತೆ ಇದೆ. ಭ್ರಷ್ಟಾಚಾರ ಕಿತ್ತುಹಾಕಲು ಸಮಾನ ಮನಸ್ಕರು ಸೇರಿ ಆಲೋಚನೆ ಮಾಡುವ ಅಗತ್ಯವಿದೆ’ ಎಂದಿದ್ದರು.
ಹೊಸ ಪಕ್ಷದ ಉದ್ಘಾಟನೆಗೆ ಟ್ವಿಟರ್ ಮೂಲಕ ಎಲ್ಲರಿಗೂ ಕಮಲ್ ಹಾಸನ್ ಸ್ವಾಗತ ಕೋರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.