ADVERTISEMENT

ಕೇರಳ: ಕಂದಕಕ್ಕೆ ಉರುಳಿ ಬಿದ್ದ ಬಸ್, 62 ಮಂದಿ ಶಬರಿಮಲೆ ಯಾತ್ರಿಕರಿಗೆ ಗಾಯ

ಪಿಟಿಐ
Published 28 ಮಾರ್ಚ್ 2023, 10:36 IST
Last Updated 28 ಮಾರ್ಚ್ 2023, 10:36 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪತ್ತನಂತಿಟ್ಟ: ಶಬರಿಮಲೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್‌ವೊಂದು ಮಂಗಳವಾರ ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿ ಬಿದ್ದಿದ್ದು, ಬಸ್‌ನಲ್ಲಿದ್ದ 62 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಪಡೆದು ತಮಿಳುನಾಡಿಗೆ ಹಿಂದಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಬಸ್‌ನಲ್ಲಿ ತಮಿಳುನಾಡಿನ ಮೈಲಾಡತುರೈ ಜಿಲ್ಲೆಯ ಒಂಬತ್ತು ಮಕ್ಕಳು ಸೇರಿದಂತೆ 64 ಯಾತ್ರಿಕರನ್ನು ಒಳಗೊಂಡಿದ್ದ ಬಸ್ ಮಧ್ಯಾಹ್ನ 1.30 ರ ಸುಮಾರಿಗೆ ನಿಲಕಲ್‌ ಬಳಿಯ ಎಲವುಂಕಲ್‌ನಲ್ಲಿ ರಸ್ತೆಯಿಂದ ಕಂದಕಕ್ಕೆ ಉರುಳಿದೆ.

ADVERTISEMENT

ಯಾತ್ರಿಕರಲ್ಲಿ 62 ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಪತ್ತನಂತಿಟ್ಟ ಮತ್ತು ಎರುಮೇಲಿಯ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.