ADVERTISEMENT

ಉತ್ತರ ಪ್ರದೇಶ: ಕ್ಯಾಂಟರ್‌ -ಆ್ಯಂಬುಲೆನ್ಸ್‌ ಮಧ್ಯೆ ಡಿಕ್ಕಿ, 7 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 31 ಮೇ 2022, 5:16 IST
Last Updated 31 ಮೇ 2022, 5:16 IST
ಅಪಘಾತದ ದೃಶ್ಯ
ಅಪಘಾತದ ದೃಶ್ಯ   

ಲಖನೌ: ಉತ್ತರ ಪ್ರದೇಶದ ರಾಯ್‌ಬರೇಲಿ ಜಿಲ್ಲೆಯಲ್ಲಿ ಕ್ಯಾಂಟರ್‌ ಹಾಗೂ ಆ್ಯಂಬುಲೆನ್ಸ್‌ ನಡುವೆ ಡಿಕ್ಕಿ ಸಂಭವಿಸಿದ್ದು 7 ಜನರು ಮೃತಪಟ್ಟಿದ್ದಾರೆ.

ರಾಯ್‌ಬರೇಲಿಯ ಲಖನೌ–ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಆ್ಯಂಬುಲೆನ್ಸ್‌ನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ 6 ಜನರು ಮೃತಪಟ್ಟಿದ್ದಾರೆ. ಆ್ಯಂಬುಲೆನ್ಸ್‌ ಚಾಲಕ ಕೂಡ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತರು ಪಿಲಿಭಿಟ್‌ ನಿವಾಸಿಗಳಾಗಿದ್ದಾರೆ. ಇವರು ತಪಾಸಣೆಗಾಗಿ ದೆಹಲಿ ಆಸ್ಪತ್ರೆಗೆ ತೆರಳಿದ್ದರು. ದೆಹಲಿಯಿಂದ ಹಿಂತಿರುಗುವಾಗ ಈ ಘಟನೆ ಸಂಭಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್‌ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ನಂತರ ಕ್ಯಾಂಟರ್‌ಗೆ ಡಿಕ್ಕಿಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡುವಂತೆ ಅವರು ವೈದ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.