ADVERTISEMENT

ಆರೋಪಿ ಮನೆ ಶೋಧದ ವೇಳೆ ಹೃದಯಾಘಾತದಿಂದ ತಂದೆ ಸಾವು

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2022, 15:32 IST
Last Updated 27 ನವೆಂಬರ್ 2022, 15:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕುಂಟಿ, ಜಾರ್ಖಂಡ್‌: ಜಾನುವಾರು ಕಳ್ಳಸಾಗಾಣಿಕೆ ಮೊಕದ್ದಮೆಯ ಆರೋಪಿಯೊಬ್ಬನ ಮನೆಯಲ್ಲಿ ಶೋಧಕಾರ್ಯ ನಡೆಸಲು ಪೊಲೀಸರು ತೆರಳಿದ್ದ ವೇಳೆ ಆರೋಪಿಯ ತಂದೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಲ್ಲಿ ಭಾನುವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿ ಇಝರ್‌ ಅಹ್ಮದ್‌ ಎಂಬಾತನನ್ನು ಬಂಧಿಸಲು ರೊಡೊ ಗ್ರಾಮಕ್ಕೆ ಪೊಲೀಸರು ತೆರಳಿದ್ದ ಪೊಲೀಸರು, ಆತನ ಮನೆಯನ್ನು ಶೋಧಿಸುವ ವೇಳೆ ತಂದೆ ಮಹಮ್ಮದ್ ನಿಜಾಮುದ್ದೀನ್‌ ಅವರು ಇದ್ದಕ್ಕಿದ್ದಂತೆ ಕುಸಿದರು. ಅವರು ಹೃದಯಾಘಾತದಿಂದ ಮೃತಪಟ್ಟರು ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಪೊಲೀಸರು ತಳ್ಳಿದ್ದರಿಂದ ಕೆಳಗೆ ಬಿದ್ದು ಅವರು ಮೃತಪಟ್ಟರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ನಿಜಾಮುದ್ದೀನ್‌ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.