ADVERTISEMENT

ಕನ್ಹಯ್ಯ ಪ್ರಕರಣ ವರದಿಗೆ ಸೂಚನೆ

ಪಿಟಿಐ
Published 19 ಫೆಬ್ರುವರಿ 2020, 19:45 IST
Last Updated 19 ಫೆಬ್ರುವರಿ 2020, 19:45 IST
ಕನ್ಹಯ್ಯ ಕುಮಾರ್
ಕನ್ಹಯ್ಯ ಕುಮಾರ್   

ನವದೆಹಲಿ:ಜೆಎನ್‌ಯುನ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು ಇತರರ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ವಿಚಾರದ ಕುರಿತು ಏಪ್ರಿಲ್‌ 3ರ ಒಳಗೆ ಪ್ರಗತಿ ವರದಿ ನೀಡಬೇಕು ಎಂದು ದೆಹಲಿ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಕನ್ನಯ್ಯ ಕುಮಾರ್‌ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ದೇಶದ್ರೋಶದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಪುರುಷೋತ್ತಮ್‌ ಪಾಠಕ್‌ ನಿರ್ದೇಶನ ನೀಡಿದ್ದಾರೆ. ಜತೆಗೆ, ಸರ್ಕಾರಕ್ಕೆ ಈ ಕುರಿತು ಜ್ಞಾಪಕ ಮಾಡುವಂತೆಯೂ ಪೊಲೀಸರಿಗೆ ಕೋರ್ಟ್ ಹೇಳಿದೆ.

ಇವರ ವಿರುದ್ಧ ಕ್ರಮ ಜರುಗಿಸಲು ಒಪ್ಪಿಗೆ ನೀಡುವಲ್ಲಿ ವಿಳಂಬವಾಗುತ್ತಿದೆ. ಈ ಕುರಿತ ಪತ್ರವು ಇನ್ನೂ ದೆಹಲಿ ಸರ್ಕಾರದ ಬಳಿ ಇದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.