ADVERTISEMENT

ಕೊರೊನಾ ಭೀತಿ: ಉತ್ತರ ಪ್ರದೇಶದಲ್ಲಿ ಸರ್ಕಾರಿ ಉದ್ಯೋಗಿ ಆತ್ಮಹತ್ಯೆ

ಏಜೆನ್ಸೀಸ್
Published 2 ಏಪ್ರಿಲ್ 2020, 9:10 IST
Last Updated 2 ಏಪ್ರಿಲ್ 2020, 9:10 IST
ಉತ್ತರಪ್ರದೇಶದ ಶಹರನ್‌ಪುರ ಪಿ.ದಿನೇಶ್ ಕುಮಾರ್
ಉತ್ತರಪ್ರದೇಶದ ಶಹರನ್‌ಪುರ ಪಿ.ದಿನೇಶ್ ಕುಮಾರ್    

ಉತ್ತರಪ್ರದೇಶ: ಸರ್ಕಾರಿ ಉದ್ಯೋಗಿಯೊಬ್ಬರು ಕೊರೊನಾ ವೈರಸ್ ಸೋಂಕಿನ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ನಕುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಶಹರನ್ ಪುರ ನಿವಾಸಿ ಆತ್ಯಹತ್ಯೆ ಮಾಡಿಕೊಂಡಿದ್ದು, ಇವರು ಬುಧವಾರ ರಾತ್ರಿ ತಮ್ಮ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಬೆಳಿಗ್ಗೆ ಎಂದಿನಂತೆ ಮನೆಯವರು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಶವದ ಪಕ್ಕದಲ್ಲಿ ಪತ್ರವೊಂದು ದೊರೆತಿದ್ದು, ಅದರಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಭಯಗೊಂಡಿದ್ದಾಗಿ ಬರೆದಿದ್ದಾರೆ.

ಆತ ಕೊರೊನಾ ಸೋಂಕು ಭಯದಿಂದ ಮಾನಸಿಕವಾಗಿ ಆಘಾತಗೊಂಡಿದ್ದ ಎಂದು ಕುಟುಂಬದ ಸದಸ್ಯರು ಪೊಲೀಸರಿಗೆ ತಿಳಿಸಿದ್ದಾರೆ.
ನಕುರ್ ಪೊಲೀಸರು ಸ್ಥಳಕ್ಕೆ ಧಾವಿಸಿ ಶವದ ಮಹಜರು ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿದಿದೆ ಎಂದು ಎಸ್ ಪಿ ದಿನೇಶ್ ಕುಮಾರ್ ಪಿ. ಸುದ್ದಿಗಾರರಿಗೆ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.