ADVERTISEMENT

ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೇತನ್ಯಾಹು 'ದೆವ್ವ'- ಅಸಾದುದ್ದೀನ್‌ ಓವೈಸಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಅಕ್ಟೋಬರ್ 2023, 6:36 IST
Last Updated 15 ಅಕ್ಟೋಬರ್ 2023, 6:36 IST
<div class="paragraphs"><p>ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್‌ ಓವೈಸಿ </p></div>

ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್‌ ಓವೈಸಿ

   

ಹೈದರಾಬಾದ್‌: ಸಂಸದ ಹಾಗೂ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್‌ ಓವೈಸಿ ಅವರು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೇತನ್ಯಾಹು ಅವರನ್ನು ದೆವ್ವ ಎಂದು ಕರೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ಟೀನ್ ಜತೆ ನಿಲ್ಲುವಂತೆ ಓವೈಸಿ ಒತ್ತಾಯಿಸಿದ್ದಾರೆ.

ADVERTISEMENT

ಪ್ಯಾಲೆಸ್ಟೀನ್‌ ಕೇವಲ ಮುಸ್ಲಿಮರ ವಿಷಯವಾಗಿಲ್ಲ, ಮಾನವೀಯ ಸಮಸ್ಯೆಯಾಗಿದೆ, ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಜನರಿಗೆ ಸಹಾಯ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. 

ಪ್ಯಾಲೆಸ್ಟೀನ್‌ನಲ್ಲಿ ಸುಮಾರ ಹತ್ತು ಲಕ್ಷ ಜನರು ಸೂರು ಕಳೆದುಕೊಂಡು ಅಲೆದಾಡುತ್ತಿದ್ದಾರೆ, ಸಾವಿರಾರು ಜನರು ಗಾಯಾಳುಗಳಾಗಿದ್ದಾರೆ ಅವರಿಗೆ ಮೋದಿ ಸ್ಪಂದಿಸಬೇಕು ಎಂದರು. 

ಪ್ಯಾಲೆಸ್ಟೀನ್‌ ಬೆಂಬಲಿಸುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್‌ ಹೇಳಿಕೆ ಬಗ್ಗೆ ಓವೈಸಿ ಕಿಡಿಕಾರಿದರು.

ಮುಖ್ಯಮಂತ್ರಿಗಳೇ, ನಾನು ಹೆಮ್ಮೆಯಿಂದ ಪ್ಯಾಲೆಸ್ಟೀನ್‌ ಮತ್ತು ನಮ್ಮ ತ್ರಿವರ್ಣ ಧ್ವಜವನ್ನು ಧರಿಸುತ್ತಿದ್ದೇನೆ. ನಾನು ಅಲ್ಲಿನ ಜನರ ಪರವಾಗಿ ನಿಲ್ಲುತ್ತೇನೆ, ನೀವು ಎಷ್ಟು ಪ್ರಕರಣಗಳನ್ನು ಬೇಕಾದರೂ ದಾಖಲಿಸಬಹುದು ಎಂದರು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.