ADVERTISEMENT

ಸಮಯ ವ್ಯರ್ಥ ಮಾಡಿದ ಕಾಂಗ್ರೆಸ್‌

ಏಜೆನ್ಸೀಸ್
Published 21 ಏಪ್ರಿಲ್ 2019, 20:15 IST
Last Updated 21 ಏಪ್ರಿಲ್ 2019, 20:15 IST
   

ನವದೆಹಲಿ (ಪಿಟಿಐ): ‘ಮೈತ್ರಿ ಮಾತುಕತೆಯ ಹೆಸರಿನಲ್ಲಿ ಕಾಂಗ್ರೆಸ್‌ ಪಕ್ಷ ನಮ್ಮ ಸಮಯವನ್ನು ವ್ಯರ್ಥಮಾಡಿದೆ’ ಎಂದು ಎಎಪಿಯ ಹಿರಿಯ ಮುಖಂಡ ಗೋಪಾಲ್‌ ರೈ ಆರೋಪಿಸಿದ್ದಾರೆ. ‘ದೆಹಲಿಯಲ್ಲಿ ಉಳಿದಿರುವ ಆರು ಲೋಕಸಭಾ ಕ್ಷೇತ್ರಗಳಿಗೆ ನಮ್ಮ ಅಭ್ಯರ್ಥಿಗಳು ಸೋಮವಾರ ನಾಮಪತ್ರ ಸಲ್ಲಿಸುವರು’ ಎಂದೂ ಅವರು ತಿಳಿಸಿದ್ದಾರೆ. ಹರಿಯಾಣದ ಮೂರು ಕ್ಷೇತ್ರಗಳಿಗೆ ಎಎಪಿ ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಲಾಗಿದೆ. ಹರಿಯಾಣದಲ್ಲಿ ಎಎಪಿ ಮುಖಂಡ ಅರವಿಂದ ಕೇಜ್ರಿವಾಲ್‌ ಅವರು ಮೂರು ರ್‍ಯಾಲಿಗಳನ್ನು ಆಯೋಜಿಸಲಿದ್ದಾರೆ ಎಂದು ರೈ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.