ADVERTISEMENT

ರಾಘವ್‌ ಛಡ್ಡಾ ಶೀಘ್ರ ಬಂಧನ ಸಾಧ್ಯತೆ: ಕೇಜ್ರಿವಾಲ್‌

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2022, 10:43 IST
Last Updated 30 ಸೆಪ್ಟೆಂಬರ್ 2022, 10:43 IST
ರಾಘವ್‌ ಛಡ್ಡಾ
ರಾಘವ್‌ ಛಡ್ಡಾ   

ನವದೆಹಲಿ: ಎಎಪಿ ನಾಯಕ ರಾಘವ್‌ ಛಡ್ಡಾ ಅವರು ಪಕ್ಷದ ಗುಜರಾತ್ ಘಟಕದ ಸಹ ಉಸ್ತುವಾರಿಯಾಗಿ ನೇಮಕವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲು ತಯಾರಿ ನಡೆಯುತ್ತಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರು ಶುಕ್ರವಾರ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಗುಜರಾತ್‌ ಸಹ ಉಸ್ತುವಾರಿಯಾಗಿ ನೇಮಕರಾದ ಕಾರಣ ಮತ್ತು ಪಕ್ಷದ ಪ್ರಚಾರಗಳಲ್ಲಿ ಭಾಗವಹಿಸುತ್ತಿರುವ ಕಾರಣ ರಾಘವ್‌ ಛಡ್ಡಾ ಅವರನ್ನು ಬಂಧಿಸಲಾಗುತ್ತದೆ ಎಂಬ ಮಾತನ್ನು ನಾವು ಕೇಳುತ್ತಿದ್ದೇವೆ.ಯಾವ ಮೊಕದ್ದಮೆಯಲ್ಲಿ ಅವರನ್ನು ಬಂಧಿಸಬೇಕು ಮತ್ತು ಅವರ ವಿರುದ್ಧ ಯಾವ ಆರೋಪ ಮಾಡಬೇಕು ಎಂಬ ಕುರಿತು ಅವರು ಸದ್ಯ ಕೆಲಸ ಮಾಡುತ್ತಿದ್ದಾರೆ’ ಎಂದು ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿಯಲ್ಲಿ ನಡೆಯಲಾಗಿದೆ ಎನ್ನಲಾದ ಹಗರಣದ ಮೊಕದ್ದಮೆ ಸಂಬಂಧಿಸಿಎಎಪಿ ಮಾಧ್ಯಮ ಸಂವಹನ ಉಸ್ತುವಾರಿ ವಿಜಯ್‌ ನಾಯರ್‌ ಅವರನ್ನು ಸಿಬಿಐ ಮಂಗಳವಾರ ಬಂಧಿಸಿತ್ತು. ಆ ಬಳಿಕ ಅವರು ಈ ಟ್ವೀಟ್‌ ಮಾಡಿದ್ದಾರೆ.

ADVERTISEMENT

ಕಳೆದ ವರ್ಷ ನಡೆದಿದ್ದ ಪಂಜಾಬ್‌ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಭಾರಿ ಗೆಲುವು ದಾಖಲಿಸಿದ್ದರಲ್ಲಿ ರಾಘವ್‌ ಅವರು ಪ್ರಮುಖ ಪಾತ್ರ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.