ADVERTISEMENT

ದೆಹಲಿ ಅಬಕಾರಿ ನೀತಿ ಪ್ರಕರಣ: ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್‌ಗೆ ಜಾಮೀನು ಮಂಜೂರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಮೇ 2023, 6:32 IST
Last Updated 26 ಮೇ 2023, 6:32 IST
ಸತ್ಯೇಂದ್ರ ಜೈನ್‌
ಸತ್ಯೇಂದ್ರ ಜೈನ್‌   

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಆರು ವಾರಗಳ ಕಾಲ ಜಾಮೀನು ಮಂಜೂರು ಮಾಡಿದೆ.

ಅನಾರೋಗ್ಯ ಕಾರಣ ಅವರಿಗೆ ಜಾಮೀನು ನೀಡಲಾಗಿದೆ. ಅನುಮತಿ ಇಲ್ಲದೆ ದೆಹಲಿಯಿಂದ ಹೊರಗೆ ಹೋಗುವಂತಿಲ್ಲ ಎಂದು ಷರತ್ತು ವಿಧಿಸಿದೆ.

ಗುರುವಾರ ಅವರು ತಿಹಾರ್‌ ಜೈಲಿನ ಸ್ನಾನಗೃಹದಲ್ಲಿ ತಲೆ ತಿರುಗಿ ಬಿದ್ದಿದ್ದರು. ಅವರನ್ನು ಇಲ್ಲಿನ ಲೋಕನಾಯಕ ಜಯಪ್ರಕಾಶ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.