ADVERTISEMENT

ಪೊಲೀಸರ ಮೇಲೆ ದಾಳಿ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಅಮಾನತುಲ್ಲಾ ಖಾನ್ ಅರ್ಜಿ

ಪಿಟಿಐ
Published 13 ಫೆಬ್ರುವರಿ 2025, 6:46 IST
Last Updated 13 ಫೆಬ್ರುವರಿ 2025, 6:46 IST
<div class="paragraphs"><p>ಎಎಪಿ ಶಾಸಕ ಅಮಾನತುಲ್ಲಾ ಖಾನ್‌</p></div>

ಎಎಪಿ ಶಾಸಕ ಅಮಾನತುಲ್ಲಾ ಖಾನ್‌

   

ನವದೆಹಲಿ: ದೆಹಲಿಯ ಜಾಮಿಯಾ ನಗರದಲ್ಲಿ ಪೊಲೀಸರ ಮೇಲೆ ನಡೆದಿದ್ದ ದಾಳಿಯ ನೇತೃತ್ವ ವಹಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ಅಮಾನತುಲ್ಲಾ ಖಾನ್‌ ಇಂದು (ಗುರುವಾರ) ನಿರೀಕ್ಷಣಾ ಜಾಮೀನು ಕೋರಿ ದೆಹಲಿ ನ್ಯಾಯಾಲಯದ ಮೋರೆ ಹೋಗಿದ್ದಾರೆ.

ತನಿಖೆಗೂ ಮೊದಲು ಬಂಧನದಿಂದ ರಕ್ಷಣೆ ಕೋರಿ ವಿಶೇಷ ನ್ಯಾಯಾಧೀಶ ಜೀತೇಂದ್ರ ಸಿಂಗ್‌ ಅವರಿಗೆ ಖಾನ್‌ ಅರ್ಜಿ ಸಲ್ಲಿಸಿದ್ದು, ತನ್ನ ವಿರುದ್ಧ ಹೊರಿಸಲಾದ ಆರೋಪಗಳು ಸುಳ್ಳು ಎಂದು ಹೇಳಿದ್ದಾರೆ.

ADVERTISEMENT

ದೆಹಲಿಯ ಜಾಮಿಯಾ ನಗರದಲ್ಲಿ ಪೊಲೀಸರ ಮೇಲೆ ನಡೆದಿದ್ದ ದಾಳಿಯ ನೇತೃತ್ವ ವಹಿಸಿದ ಆರೋಪದ ಮೇಲೆ ದೆಹಲಿಯ ಓಖ್ಲಾದ ಎಎಪಿ ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಅಮಾನತುಲ್ಲಾ ಖಾನ್ ನೇತೃತ್ವದ ಗುಂಪೊಂದು ಕೊಲೆ ಯತ್ನ ಪ್ರಕರಣದ ಅಪರಾಧಿಗೆ ಬಂಧನದಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.