ನವದೆಹಲಿ: ಲಾಭದಾಯಕ ಹುದ್ದೆ ಹೊಂದಿರುವ ಆರೋಪದಡಿ ದೆಹಲಿಯ ಆಮ್ ಆದ್ಮಿ ಪಕ್ಷದ (ಆಪ್) 27 ಶಾಸಕರನ್ನು ಅನರ್ಹಗೊಳಿಸ
ಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ತಿರಸ್ಕರಿಸಿದ್ದಾರೆ.
ದೆಹಲಿಯಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿ ಕಲ್ಯಾಣ ಸಮಿತಿಯ ಮುಖ್ಯಸ್ಥರನ್ನಾಗಿ ಈ ಶಾಸಕರನ್ನು ನೇಮಕ ಮಾಡಲಾಗಿತ್ತು. ಇದು ಲಾಭದಾಯಕ ಹುದ್ದೆಯಾಗಿದ್ದು, ಈ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.