ADVERTISEMENT

ಪಕ್ಷಕ್ಕೆ ಸೇರಲು ಬಿಜೆಪಿ ನಾಯಕರಿಂದ ಆಮಿಷ: ಎಎಪಿ ಸಂಸದ ಆರೋಪ

ಪಿಟಿಐ
Published 5 ಡಿಸೆಂಬರ್ 2021, 14:20 IST
Last Updated 5 ಡಿಸೆಂಬರ್ 2021, 14:20 IST
ಭಗವಂತ್‌ ಮಾನ್‌
ಭಗವಂತ್‌ ಮಾನ್‌   

ಚಂಡೀಗಡ: ಮುಂದಿನ ವರ್ಷ ಪಂಜಾಬ್‌ ರಾಜ್ಯದ ವಿಧಾನಸಭಾ ಚುನಾವಣೆ ಇರುವ ಕಾರಣ, ಬಿಜೆಪಿ ಮುಖಂಡರೊಬ್ಬರು ತಮ್ಮನ್ನು ಪಕ್ಷಕ್ಕೆ ಸೇರುವಂತೆ ಆಮಿಷ ಒಡ್ಡಿದ್ದಾರೆ ಎಂದು ಆಮ್‌ ಆದ್ಮಿ ಪಕ್ಷದ ಪಂಜಾಬ್‌ ಘಟಕದ ಅಧ್ಯಕ್ಷ ಭಗವಂತ್‌ ಮಾನ್‌ ಆರೋಪಿಸಿದ್ದಾರೆ.

ಬಿಜೆಪಿ ಸೇರಿದರೆ ಹಣ ಮತ್ತು ಕೇಂದ್ರ ಸಂಪುಟದಲ್ಲಿ ಸ್ಥಾನ ದೊರಕಿಸಿಕೊಡುವ ಆಮಿಷವನ್ನು ಅವರು ನೀಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ತಮಗೆ ಆಮಿಷ ಒಡ್ಡಿದವರ ಹೆಸರನ್ನು ಬಹಿರಂಗಪಡಿಸದ ಅವರು, ‘ನನ್ನನ್ನು ಹಣ ಮತ್ತು ಸಚಿವ ಸ್ಥಾನದ ಆಮಿಷವೊಡ್ಡಿ ಖರೀದಿಸಲು ಸಾಧ್ಯವಿಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.