ADVERTISEMENT

ಅಯೋಧ್ಯೆ, ಲಖನೌದಲ್ಲಿ ಎಎಪಿ ತಿರಂಗಾ ಯಾತ್ರೆ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2021, 7:57 IST
Last Updated 29 ಆಗಸ್ಟ್ 2021, 7:57 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಮೊದಲು ಆಮ್‌ ಆದ್ಮಿ ಪಕ್ಷವು (ಎಎಪಿ) ಭಾರತದ 75ನೇ ವರ್ಷದ ಸಾತಂತ್ರ್ಯೋತ್ಸವ ಪ್ರಯುಕ್ತ ಅಯೋಧ್ಯೆ, ಲಖನೌ ಮತ್ತು ನೋಯಿಡಾದಲ್ಲಿ ‘ತಿರಂಗಾ ಯಾತ್ರೆಗಳನ್ನು’ ಕೈಗೊಳ್ಳಲಿದೆ ಎಂದು ಪಕ್ಷದ ನಾಯಕರು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ಸೆಪ್ಟೆಂಬರ್‌ ಮಧ್ಯಭಾಗದಲ್ಲಿ ಯಾತ್ರೆ ತೆರಳಲಿದೆ. ನೋಯಿಡಾದಲ್ಲಿ ಸೆ.1ರಂದು ಯಾತ್ರೆ ನಡೆಯಲಿದೆ ಎಂದು ಪಕ್ಷದ ನಾಯಕ ಸಂಜಯ್‌ ಸಿಂಗ್‌ ತಿಳಿಸಿದ್ದಾರೆ.

ಈ ಯಾತ್ರೆಗಳಲ್ಲಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಭಾಗವಹಿಸುವರು. ಭ್ರಷ್ಟಾಚಾರ ಮತ್ತು ಜಾತೀಯತೆಯಿಂದ ಕೂಡಿದ ರಾಜಕೀಯದ ವಿರುದ್ಧ ಜನರನ್ನು ಒಗ್ಗೂಡಿಸುವುದು ಯಾತ್ರೆಯ ಉದ್ದೇಶ ಎಂದು ವಿವರಿಸಿದ್ದಾರೆ.

ADVERTISEMENT

ಎಎಪಿಯು ಉತ್ತರಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್‌, ಹಿಮಾಚಲ ಪ್ರದೇಶ ಮತ್ತು ಗುಜರಾತ್‌ ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.