ADVERTISEMENT

ಯುಎಇನಿಂದ ಭಾರತಕ್ಕೆ ಕೊಲೆ ಆರೋಪಿ ಕರೆತಂದ ಸಿಬಿಐ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2024, 14:15 IST
Last Updated 16 ಫೆಬ್ರುವರಿ 2024, 14:15 IST
   

ನವದೆಹಲಿ: ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಶುಕ್ರವಾರ ಯುಎಇನಿಂದ ಭಾರತಕ್ಕೆ ಕರೆತರಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

1994ರಲ್ಲಿ ಹರಿಯಾಣದಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದರ ಆರೋಪಿಯಾಗಿದ್ದ ನರೇಂದರ್‌ ಸಿಂಗ್‌ನನ್ನು 1998ರಲ್ಲಿ ವಿಚಾರಣಾ ನ್ಯಾಯಾಲಯವು ಪ್ರಕರಣದಿಂದ ಖುಲಾಸೆಗೊಳಿಸಿತ್ತು. ಆದರೆ 2009ರಲ್ಲಿ ಪಂಜಾಬ್‌ ಮತ್ತು ಹರ್ಯಾಣ ಹೈಕೋರ್ಟ್ ನರೇಂದರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಈ ವೇಳೆಗಾಗಲೇ ತಲೆಮೆರೆಸಿಕೊಂಡಿದ್ದ ನರೇಂದರ್‌ ಪತ್ತೆಗಾಗಿ ಹರಿಯಾಣ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಹರಿಯಾಣ ಪೊಲೀಸರ ಮನವಿಯ ಹಿನ್ನೆಲೆಯಲ್ಲಿ 2023ರ ನವೆಂಬರ್‌ 7ರಂದು ಸಿಬಿಐ ನರೇಂದರ್‌ ವಿರುದ್ಧ ಇಂಟರ್‌ ಪೋಲ್‌ ರೆಡ್‌ ನೋಟಿಸ್‌ ಜಾರಿಗೊಳಿಸಿತ್ತು. 

ADVERTISEMENT

‘ನರೇಂದರ್‌ ಯುಎಇಯಲ್ಲಿ ಇರುವುದನ್ನು ಪತ್ತೆ ಹಚ್ಚಿದ ಸಿಬಿಐ. ಅಲ್ಲಿನ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಭಾರತಕ್ಕೆ ಕರೆತಂದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.