ADVERTISEMENT

ಐಎಎಸ್ ಅಕಾಡೆಮಿ ಸಂಸ್ಥಾಪಕ ಶಂಕರನ್‌ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2018, 13:55 IST
Last Updated 12 ಅಕ್ಟೋಬರ್ 2018, 13:55 IST
ಶಂಕರನ್‌ ದೇವರಾಜನ್‌
ಶಂಕರನ್‌ ದೇವರಾಜನ್‌   

ಚೆನ್ನೈ: ಇಲ್ಲಿನ ಶಂಕರ್ ಐಎಎಸ್ ಅಕಾಡೆಮಿಯ ಸಂಸ್ಥಾಪಕ ಶಂಕರನ್‌ ದೇವರಾಜನ್‌ (45) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚೆನ್ನೈನ ಮೈಲಾಪುರದಲ್ಲಿರುವ ಮನೆಯಲ್ಲಿ ಶಂಕರನ್‌ ಫ್ಯಾನಿಗೆ ನೇಣು ಹಾಕಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಕೃಷ್ಣಗಿರಿಯ ಶಂಕರನ್‌ ಅವರು 14 ವರ್ಷಗಳ ಹಿಂದೆ ಚೆನ್ನೈನಲ್ಲಿ ಆರಂಭಿಸಿದ್ದ ಸಂಸ್ಥೆಯಲ್ಲಿ ತರಬೇತಿ ಪಡೆದ 900ಕ್ಕೂ ಹೆಚ್ಚು ಮಂದಿ ನಾಗರಿಕ ಸೇವೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.