ADVERTISEMENT

ಯುಎನ್‌ಎಸ್‌ಸಿ ಶಾಶ್ವತ ಸದಸ್ಯತ್ವಕ್ಕೆ ಆದ್ಯತೆ: ಕೇಂದ್ರ ಸಚಿವ ವಿ.ಮುರಳೀಧರನ್

ಪಿಟಿಐ
Published 17 ಸೆಪ್ಟೆಂಬರ್ 2020, 14:28 IST
Last Updated 17 ಸೆಪ್ಟೆಂಬರ್ 2020, 14:28 IST
ವಿ.ಮುರಳೀಧರನ್
ವಿ.ಮುರಳೀಧರನ್   

ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (ಯುಎನ್‌ಎಸ್‌ಸಿ) ಶಾಶ್ವತ ಸದಸ್ಯತ್ವ ಪಡೆಯಲು ಭಾರತ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವವಿ.ಮುರಳೀಧರನ್ ತಿಳಿಸಿದ್ದಾರೆ.

ಈ ಕುರಿತು ರಾಜ್ಯಸಭೆಯಲ್ಲಿ ಎದುರಾದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ಭದ್ರತಾ ಮಂಡಳಿಯ ಸುಧಾರಣೆ ಕುರಿತುಇತರ ದೇಶಗಳ ಜತೆಗಿನ ಮಾತುಕತೆಗಳಲ್ಲಿ ಭಾರತ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಈ ಸಂಬಂಧ, ಇತರ ಸಮಾನ ಮನಸ್ಕ ದೇಶಗಳೊಂದಿಗೆ ಕೆಲಸ ಮಾಡುತ್ತಿದೆ’ ಎಂದು ಅವರು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.